ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಗಣೇಶ ಬಂಗೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿದ್ಯಾರ್ಥಿಗಳು ತಮ್ಮ ಶಾಲೆಯ ಇರುವ ಸಮಸ್ಯೆಗಳ ಬಗ್ಗೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದರು.
ಮುಂಡಾಜೆ ಶಾಲೆಗೆ ಹೋಗುವ ರಸ್ತೆಯ ವ್ಯವಸ್ಥೆ, ಆವರಣ ಗೋಡೆ , ಶಿಕ್ಷಕರ ಕೊರತೆಯ ಬಗ್ಗೆ , ಶಾಲಾ ಕೊಠಡಿ, ಡೆಸ್ಕ್ ಬೆಂಚುಗಳ ಕೊರತೆ , ಹಾಗೂ ಕೊಂಬಿನಡ್ಕ ಶಾಲೆಯಲ್ಲಿ ಆಟದ ಮೈದಾನದ ಕೊರತೆ, ಮರದ ಗೆಲ್ಲುಗಳನ್ನು ಕಡಿಯುವುದು , ಬೀದಿನಾಯಿಗಳ ಉಪಟಳ , ಮೇಲ್ಚಾವಣಿ ಸೋರುವುದರ ಬಗ್ಗೆ ಮಾಹಿತಿ ನೀಡಿದರು.

ಮುಂಡಾಜೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಶ್ರಾವ್ಯ ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಮಮತಾ ಇವರು ಗ್ರಂಥಾಲಯದಲ್ಲಿ ಮಕ್ಕಳಿಗಾಗಿ ಹಮ್ಮಿಕೊಳ್ಳುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಮೇಲ್ವಿಚಾರಕರಾದ ಸುಶೀಲ ಮಕ್ಕಳಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ನಾಗವೇಣಿ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು,. ಆಶಾ ಕಾರ್ಯಕರ್ತರು, ಸ್ಥಳೀಯ ಶಾಲೆಗಳ ಶಾಲಾ ನಾಯಕ ನಾಯಕಿಯರು, ಶಾಲಾ ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಸ್ವಾಗತಿಸಿ ವಂದಿಸಿದರು.











