July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಗಣೇಶ ಬಂಗೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿದ್ಯಾರ್ಥಿಗಳು ತಮ್ಮ ಶಾಲೆಯ ಇರುವ ಸಮಸ್ಯೆಗಳ ಬಗ್ಗೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದರು.
ಮುಂಡಾಜೆ ಶಾಲೆಗೆ ಹೋಗುವ ರಸ್ತೆಯ ವ್ಯವಸ್ಥೆ, ಆವರಣ ಗೋಡೆ , ಶಿಕ್ಷಕರ ಕೊರತೆಯ ಬಗ್ಗೆ , ಶಾಲಾ ಕೊಠಡಿ, ಡೆಸ್ಕ್ ಬೆಂಚುಗಳ ಕೊರತೆ , ಹಾಗೂ ಕೊಂಬಿನಡ್ಕ ಶಾಲೆಯಲ್ಲಿ ಆಟದ ಮೈದಾನದ ಕೊರತೆ, ಮರದ ಗೆಲ್ಲುಗಳನ್ನು ಕಡಿಯುವುದು , ಬೀದಿನಾಯಿಗಳ ಉಪಟಳ , ಮೇಲ್ಚಾವಣಿ ಸೋರುವುದರ ಬಗ್ಗೆ ಮಾಹಿತಿ ನೀಡಿದರು.

ಮುಂಡಾಜೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಶ್ರಾವ್ಯ ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಮಮತಾ ಇವರು ಗ್ರಂಥಾಲಯದಲ್ಲಿ ಮಕ್ಕಳಿಗಾಗಿ ಹಮ್ಮಿಕೊಳ್ಳುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಮೇಲ್ವಿಚಾರಕರಾದ ಸುಶೀಲ ಮಕ್ಕಳಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ನಾಗವೇಣಿ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು,. ಆಶಾ ಕಾರ್ಯಕರ್ತರು, ಸ್ಥಳೀಯ ಶಾಲೆಗಳ ಶಾಲಾ ನಾಯಕ ನಾಯಕಿಯರು, ಶಾಲಾ ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಸ್ವಾಗತಿಸಿ ವಂದಿಸಿದರು.

Related posts

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!