July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಡಿ.18ರಂದು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು. ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ.ಎಲ್.ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡಬೇಕು. ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ವಿನಂತಿಸಲಾಯಿತು.

ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Related posts

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya
error: Content is protected !!