25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಹೆಚ್ಚುವರಿ ಬಿಲ್, ಅನಿಯಮಿತ ನೀರು ಸರಬರಾಜು ಹಾಗೂ ಬೀದಿ ದೀಪಗಳ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕೆಂದು ಕೋರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಮನೆಗಳಿಗೆ ಇತ್ತೀಚೆಗೆ ವಿತರಿಸಲಾದ ನೀರಿನ ಬಿಲ್ಲುಗಳಲ್ಲಿ, ತಿಂಗಳ ನಿಗದಿತ ಶುಲ್ಕವನ್ನು ಹೊರತುಪಡಿಸಿ ಹೆಚ್ಚುವರಿ ನೀರಿನ ಬಳಕೆ ನಡೆದಿದೆ ಎಂದು ಸೂಚಿಸಿ, ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗಿದ್ದು, ಇದರಿಂದ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಭಾರೀ ಆರ್ಥಿಕ ಹೊರೆಯಾಗುತ್ತಿದೆ. ಇದಲ್ಲದೆ ಗ್ರಾಮದ ಕೆಲವೊಂದು ಪ್ರದೇಶಗಳಿಗೆ ಪ್ರತಿದಿನ ನೀರಿನ ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ. ಕೆಲವು ಕಡೆಗಳಲ್ಲಿ ದಿನಗಟ್ಟಲೆ ನೀರು ಸರಬರಾಜು ಇಲ್ಲದ ಪರಿಸ್ಥಿತಿಯೂ ಇದೆ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ನೀರಿನ ಬಳಕೆ ಎಂದು ಹೆಚ್ಚುವರಿ ಬಿಲ್ ವಿಧಿಸಿರುವುದು ಜನರಲ್ಲಿ ಗೊಂದಲ ಮತ್ತು ಅಸಮಾಧಾನವನ್ನುಂಟು ಮಾಡಿದೆ. ಅದೇ ರೀತಿ, ಗ್ರಾಮದ ಹಲವೆಡೆ ಬೀದಿ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದರಿಂದ ರಾತ್ರಿ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಭದ್ರತಾ ಸಮಸ್ಯೆಯೂ ಎದುರಾಗುತ್ತಿದೆ. ಆದುದರಿಂದ ನೀರಿನ ಬಿಲ್ಲುಗಳಲ್ಲಿ ವಿಧಿಸಿರುವ ಹೆಚ್ಚುವರಿ ಶುಲ್ಕವನ್ನು ಪುನರ್‌ಪರಿಶೀಲಿಸಿ ರದ್ದುಪಡಿಸಬೇಕು. ಎಲ್ಲಾ ಪ್ರದೇಶಗಳಿಗೆ ಸಮರ್ಪಕ ಹಾಗೂ ನಿಯಮಿತ ನೀರು ಸರಬರಾಜು ವ್ಯವಸ್ಥೆ ಮಾಡಬೇಕು. ಕಾರ್ಯನಿರ್ವಹಿಸದ ಬೀದಿ ದೀಪಗಳನ್ನು ಶೀಘ್ರದಲ್ಲಿ ದುರಸ್ತಿ ಮಾಡಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಇದಕ್ಕೂ ಮುಂಚೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಸಂಕಷ್ಟಗಳ ಮಾಹಿತಿಗಳನ್ನು ಕಲೆ ಹಾಕಿ ಸಹಿ ಸಂಗ್ರಹ ಮಾಡಲಾಗಿದ್ದ ಪ್ರತಿಯನ್ನು ಮನವಿಯೊಂದಿಗೆ ಲಗತ್ತಿಸಿ ನೀಡಲಾಯಿತು.

ಎಸ್ ಡಿ ಪಿ ಐ ನಾವೂರು ಬ್ರಾಂಚ್ ಅಧ್ಯಕ್ಷರಾದ ಮುಹಮ್ಮದ್ ಸ್ವಾದಿಕ್ ನಾವೂರು, ಜೊತೆ ಕಾರ್ಯದರ್ಶಿ ಸಲೀಂ ಮುರ, ಖಾದರ್ ನಾವೂರು, ನೌಶಾದ್ ಕೈಕಂಬ, ಇಬ್ರಾಹಿಂ ಮುರ, ಹಸೈನಾರ್ ಸೇರಿದಂತೆ ಊರಿನ ಮಹಿಳೆಯರು ಉಪಸ್ಥಿತರಿದ್ದರು.

Related posts

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!