July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

ಇಂದಬೆಟ್ಟು : ಇಲ್ಲಿಯ ತುರ್ಕರೆಬೆಟ್ಟು ರಾಜೇಶ್ ಬಿನ್ ಉರ್ಮಿಶ್ ರವರ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ಡಿ.19 ರಂದು ತಡ ರಾತ್ರಿ ವೇಳೆಗೆ ಆಕಸ್ಮಿಕ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುತ್ತದೆ.

ಈ ಸಂದರ್ಭದಲ್ಲಿ ಸ್ಥಳೀಯರ ತುರ್ತು ಸಹಕಾರದಿಂದ ಹಟ್ಟಿಯಲ್ಲಿ ಕಟ್ಟಿದ್ದ ದನ ಹಾಗೂ ಕರುವನ್ನು ರಕ್ಷಿಸಲಾಗಿದೆ. ನೀರು ಹಾಕಿ ಬೆಂಕಿ ನಂದಿಸಲಾಗಿದೆ. ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಕೊಟ್ಟಿಗೆಯಲ್ಲಿ ಇದ್ದ ರಬ್ಬರ್ ಸೀಟ್, ಅಡಿಕೆ ಹಾಗೂ ಕೃಷಿ ಸಂಬಂಧಿತ ಉಪಕರಣಗಳು, ಮೇಲ್ಚಾವಣಿ ಸುಟ್ಟು ಹೋಗಿದೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಕಾಂತ್ ಎಸ್, ಶ್ರೀಮತಿ ಸುಮಿತ್ರಾ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!