25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

ಕಳಿಯ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕಳಿಯ ಗ್ರಾಮ ಪಂಚಾಯತ್ ಮಟ್ಟದ 26ನೇ ಜನಸ್ಪಂದನ ಸಭೆ ಡಿ. 20 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಏರುಕಡಪ್ಪು ಅಂಗನವಾಡಿ ಕೇಂದ್ರದ 150 ಮೀಟರ್ ಉದ್ದದ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಗ್ರಾಮಸ್ಥರು ಶಾಸಕರಲ್ಲಿ ಬೇಡಿಕೆಯನ್ನು ಇಟ್ಟರು. ಅನುದಾನ ಕೊರತೆಯಿದ್ದಲ್ಲಿ ನಾಗರೀಕರಾದ ನಾವು ಶ್ರಮದಾನ ಮಾಡುವ ಮೂಲಕ ದುರಸ್ತಿಗೊಳಿಸುತ್ತೇವೆ. ಅದೇ ರಸ್ತೆಯ ಸಮೀಪದಲ್ಲಿರುವ ಎರಡು ಮನೆಗಳ ವ್ಯಕ್ತಿಗಳು ದುರಸ್ತಿಗೆ ಅಡ್ಡಿಪಡಿಸುತ್ತಿದ್ದಾರೆ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಶಾಸಕರಲ್ಲಿ ವಿನಂತಿಸಿದರು. ರಸ್ತೆಯನ್ನು ಪರಿಶೀಲನೆ ನಡೆಸುತ್ತೇನೆ. ಕಳೆದ ಅವಧಿಯಲ್ಲಿ ಕಳಿಯ ಗ್ರಾಮ ಪಂಚಾಯತ್ ಗೆ 21 ಕೋಟಿ ರೂಪಾಯಿ ಅನುದಾನ ಒದಗಿಸಿ ಅಭಿವೃದ್ಧಿ ಕಾರ್ಯ ನಡೆಸಲಾಗಿದೆ ಆದರೆ ಇಂದು ಸರ್ಕಾರದಿಂದ ಅಭಿವೃದ್ಧಿಗೆ ಸಮರ್ಪಕವಾಗಿ ಅನುದಾನ ದೊರೆಯುತ್ತಿಲ್ಲ ಎಂದು ಶಾಸಕರು ಬೇಸರಿಸಿದರು. ಸದ್ರಿ ರಸ್ತೆಯ ಜಾಗದ ವಿಚಾರವಾಗಿ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸುವಂತೆ ಶಾಸಕರು ಸೂಚಿಸಿದರು.

ಅರಣ್ಯ ಇಲಾಖೆ 183 ಎಕ್ರೆ ಭೂಮಿಯನ್ನು ಇಲಾಖೆ 17 ನೋಟಿಫಿಕೇಶನ್ ಮಾಡಲು ಮುಂದಾಗಿದೆ ಇದರಿಂದ ಗ್ರಾಮಸ್ಥರಿಗೆ ತೊಂದರೆ ಉಂಟಾಗಲಿದೆ. ಅರಣ್ಯ ಇಲಾಖೆ ಜನರಿಗೆ ಯಾವುದೇ ನೋಟಿಸ್ ನೀಡದೆ ಸರ್ವೇ ನಡೆಸಿದೆ ಇದರ ಪರಿಣಾಮ ಕೆಲವು ಮನೆಗಳ ಅಂಗಳದವರೆಗೂ ಸರ್ವೇ ನಡೆಸಿರುವುದು ಖಂಡನೀಯ ಎಂದು ಗ್ರಾಮಸ್ಥರು ಹೇಳಿದರು. ಅರಣ್ಯ ಇಲಾಖೆ – ಕಂದಾಯ ಇಲಾಖೆಯ ಭೂಮಿಯ ಗೊಂದಲದ ಕುರಿತು ಐಬಿಯಲ್ಲಿ ತಹಶೀಲ್ದಾರ್ ಆರ್ ಎಫ್ ಓ , ಗ್ರಾಮ ಪಂಚಾಯತ್ , ನಾಗರೀಕರ ಜೊತೆ ನಾನು ಜನವರಿಯಲ್ಲಿ ವಿಶೇಷ ಸಭೆ ನಡೆಸಲಾಗುವುದು ಎಂದು ಶಾಸಕರು ಹೇಳಿದರು.

ಅರಣ್ಯ ಇಲಾಖೆಯ ಜಾಗದ ವಿಚಾರದಲ್ಲಿ ನನ್ನ ಮೇಲೆ ಎರಡು ದೂರು ದಾಖಲಾಗಿದೆ. ರೆಖ್ಯಾದಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿದಾಗ ಹೆಚ್ಚುವರಿ ಭೂಮಿ ದೊರೆತಿದೆ. ಇದಕ್ಕೆ ಸರ್ಕಾರದಲ್ಲಿ ಅನುಮೋದನೆ ನೀಡಿದರೆ ರಾಜ್ಯದ ನಾನಾ ಭಾಗಗಳ ಇಂತಹ ಸಮಸ್ಯೆಗಳಿಗೆ ಪರಿಹಾರ ದೊರೆತಂತಾಗುತ್ತದೆ ಎಂದು ಶಾಸಕರು ತಿಳಿಸಿದರು.

ಗೋವಿಂದೂರು ಬಳಿ ಏತ ನೀರಾವರಿ ಯೋಜನೆಯ ಪೈಪ್ ಲೈನ್ ಕಾಮಗಾರಿಗೆ ಅರಣ್ಯ ಇಲಾಖೆಯ ತಡೆ ಬಂದಿದೆ ಇದನ್ನು ಶೀಘ್ರವೇ ಸರಿಪಡಿಸಬೇಕು ಎಂದು ಗ್ರಾಮಸ್ಥರು ಹೇಳಿದರು. ಈ ಕುರಿತು ಎಫ್ ಸಿಗೆ‌ ಸಲ್ಲಿಸಿರುವುದಾಗಿ ಅರಣ್ಯಾಧಿಕಾರಿ ತಿಳಿಸಿದರು. 235‌ ಸರ್ವೇ ನಂಬರ್ 30 ಸೆಂಟ್ಸ್ ಜಾಗವನ್ನು ಗಡಿ ಗುರುತು ಮಾಡಿ ಆರೋಗ್ಯ ಇಲಾಖೆಗೆ ನೀಡಬೇಕು ಎಂದು ಗ್ರಾಮಸ್ಥರು ಹೇಳಿದರು.

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಸಲ್ಲಿಸಿದರು.
ಜಾತ್ರೆ ನೇಮೋತ್ಸವದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವ ಕುರಿತು ಸಚಿವರಿಗೆ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸುವುದಾಗಿ ಶಾಸಕರು ತಿಳಿಸಿದರು.

ನಂತರ ಶಾಸಕರನ್ನು ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು

ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಮೆದಿನ, ಉಪಾಧ್ಯಕ್ಷೆ ಇಂದಿರಾ ಬಿ. ಶೆಟ್ಟಿ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ ಕೆ., ಸದಸ್ಯರು, ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya
error: Content is protected !!