September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

ಗೇರುಕಟ್ಟೆ: ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ನಿರ್ದೇಶನದಂತೆ ಕಾಜೂರು ತಂಙಳ್ ರವರು ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಡಿ.19 ರಂದು ಅಧಿಕಾರ ಸ್ವೀಕರಿಸಿದರು.

ನಂತರ ದುಅ ನೆರವೇರಿಸಿ ಮಹಾಸಭೆ ನಡೆಸಿಕೊಟ್ಟರು. ಖತೀಬ್ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಗತ ವರ್ಷದ ವರದಿ ಮತ್ತು ಜಮಾ ಖರ್ಚಿನ ವಿವರವನ್ನು ಅಬ್ದುಲ್ ಕರೀಮ್ ಸಭೆಗೆ ಓದಿ ಹೇಳಿದರು.
ಮಹಾಸಭೆಯಲ್ಲಿ ಮೊಹಲ್ಲಾದ ಅಭಿವೃದ್ಧಿಗಾಗಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೆಲ ಸದಸ್ಯರು ಸಲಹೆಗಳನ್ನು ನೀಡಿದರು.


ಜಮಾಅತರ ಅಭಿಪ್ರಾಯ ಪಡೆದು ಹೊಸ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮುಪತ್ತಿಸ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಎಸ್ ಸೈಫುಲ್ಲ,ಕೋಶಾದಿಕಾರಿಯಾಗಿ ಅಬ್ದುಲ್ ಬಶೀರ್ ಟಿಂಬರ್ ಉಪಾದ್ಯಕ್ಷರಾಗಿ ಮೊಹಮ್ಮದ್ ಹನೀಫ್ ಬಿ.ಐ.,ಅಬ್ದುಲ್ಲ ಕುಂಙ ದಾರಿಮಿ, ಸದಸ್ಯರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಬಿ.ಕೆ ರವೂಫ್ ಹಾಜಿ,ಎನ್.ಎನ್ ಮಹಮ್ಮದ್, ಅಬ್ದುಲ್ಲ ಎಸ್ ಯು, ಅಬೂಬಕ್ಕರ್ ಕೆ.ಎಮ್ ,ಶರೀಫ್ ಜಿ ಆಯ್ಕೆಯಾದರು.

Related posts

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya
error: Content is protected !!