July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

ಗೇರುಕಟ್ಟೆ: ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ನಿರ್ದೇಶನದಂತೆ ಕಾಜೂರು ತಂಙಳ್ ರವರು ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಡಿ.19 ರಂದು ಅಧಿಕಾರ ಸ್ವೀಕರಿಸಿದರು.

ನಂತರ ದುಅ ನೆರವೇರಿಸಿ ಮಹಾಸಭೆ ನಡೆಸಿಕೊಟ್ಟರು. ಖತೀಬ್ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಗತ ವರ್ಷದ ವರದಿ ಮತ್ತು ಜಮಾ ಖರ್ಚಿನ ವಿವರವನ್ನು ಅಬ್ದುಲ್ ಕರೀಮ್ ಸಭೆಗೆ ಓದಿ ಹೇಳಿದರು.
ಮಹಾಸಭೆಯಲ್ಲಿ ಮೊಹಲ್ಲಾದ ಅಭಿವೃದ್ಧಿಗಾಗಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೆಲ ಸದಸ್ಯರು ಸಲಹೆಗಳನ್ನು ನೀಡಿದರು.


ಜಮಾಅತರ ಅಭಿಪ್ರಾಯ ಪಡೆದು ಹೊಸ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮುಪತ್ತಿಸ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಎಸ್ ಸೈಫುಲ್ಲ,ಕೋಶಾದಿಕಾರಿಯಾಗಿ ಅಬ್ದುಲ್ ಬಶೀರ್ ಟಿಂಬರ್ ಉಪಾದ್ಯಕ್ಷರಾಗಿ ಮೊಹಮ್ಮದ್ ಹನೀಫ್ ಬಿ.ಐ.,ಅಬ್ದುಲ್ಲ ಕುಂಙ ದಾರಿಮಿ, ಸದಸ್ಯರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಬಿ.ಕೆ ರವೂಫ್ ಹಾಜಿ,ಎನ್.ಎನ್ ಮಹಮ್ಮದ್, ಅಬ್ದುಲ್ಲ ಎಸ್ ಯು, ಅಬೂಬಕ್ಕರ್ ಕೆ.ಎಮ್ ,ಶರೀಫ್ ಜಿ ಆಯ್ಕೆಯಾದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!