July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನ ಸಿ.ಎನ್ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರಿಂದ ತನಗೆ ಹಾಗೂ ತನ್ನ ಪತ್ನಿಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ‌.18 ರಂದು ಶಿವಮೊಗ್ಗ ಜೈಲಿನಿಂದ ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್. ಟಿ, ಯೂಟ್ಯೂಬರ್ ಸಮೀರ್.ಎಮ್.ಡಿ, ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ರಿಂದ ತನಗೆ ಮತ್ತು ತನ್ನ ಪತ್ನಿ ಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ಸೂಕ್ತ ಕಾನೂನು ಕ್ರಮ ಕೈಗೊಂಡು ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡುವ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ PO1070250601253 ರಂತೆ ದೂರರ್ಜಿಯನ್ನು ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರು ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!