23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಸೇವಾಭಾರತಿ, ಕನ್ಯಾಡಿ, ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ಡಿ 19 ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. “ದೀಪ ಜ್ಯೋತಿ ಹೇಗೆ ಬೆಳಗುತ್ತದೋ, ಹಾಗೆಯೇ ನೀವು ಈ ವಿದ್ಯೆಯನ್ನು ಉಪಯೋಗಿಸಿ ಸಮಾಜದಲ್ಲಿ ಬೆಳಗಬೇಕು” ಎಂದು ಶುಭ ಹಾರೈಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಶ್ರೀಮತಿ ಗಾಯತ್ರಿ, NRLM ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಪ್ರತಿಮಾ, ಪಂಚಾಯತ್ ಲೆಕ್ಕ ಸಹಾಯಕರು ಶ್ರೀಮತಿ ಪ್ರಮೀಳಾ, ದುರ್ಗಾಮಾತೃ ಮಂಡಳಿ ಅಧ್ಯಕ್ಷರು ಹಾಗೂ ಸಬಲಿನಿ ಯೋಜನೆಯ ಸಂಚಾಲಕಿ ಶ್ರೀಮತಿ ಮಮತಾ ಬಿ, ಕೌಶಲ್ಯ ವಲಯ ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ. ಕೆ, ಪಂಚಾಯತ್ ಸದಸ್ಯರು ಶ್ರೀಮತಿ ವಸಂತಿ, ಶ್ರೀಮತಿ ಸುನಿತಾ, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಶ್ರೀಮತಿ ಶಾಂಭವಿ ಹಾಗೂ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಸುಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 40 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ರವರು ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟಕ್ಕೆ 3 ಹೊಲಿಗೆ ಯಂತ್ರ ನೀಡುವುದಾಗಿ ತಿಳಿಸಿದ್ದು ಇದು ಮಹಿಳಾ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದಲ್ಲಿ ಕೃಷಿ ಸಖಿ ಶ್ರೀಮತಿ ಸುಚೇತಾ ಸ್ವಾಗತಿಸಿ, ಎಮ್.ಬಿ.ಕೆ ಶ್ರೀಮತಿ ಚಂದ್ರಾವತಿ ನಿರೂಪಿಸಿ, LCRP ಶ್ರೀಮತಿ ಪುಷ್ಪಾವತಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya
error: Content is protected !!