September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಮತ್ತು ಮಡಂತ್ಯಾರು ಸ್ಥಳೀಯ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಮಾನ್ಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು ಶ್ರೀಮತಿ ಸುಜಯ ವಿ ಇವರು ವಹಿಸಿಕೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಪದ್ಮಕುಮಾರ್, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಶಿಬಿರ ನಾಯಕರು ಶ್ರೀ ಗುರುಮೂರ್ತಿ ನಾಯ್ಕಪು LT(S),ಶಿಬಿರ ಸಹಾಯಕರು ವಿನೋದ್ ಚೇವಾರ್ HWB(S), ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಬೆಳ್ಳಿಯಪ್ಪ ಕೆ, ಕಾರ್ಯದರ್ಶಿ ಪ್ರಮೀಳಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಭರತ್ ರಾಜ್ ಕೆ ಉಪಸ್ಥಿತರಿದ್ದರು.

ಸ್ವಯಂ ಸೇವಕರಾಗಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಸಹಕರಿಸಿದರು.

ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 31 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ ಒಟ್ಟು 10 ಒಟ್ಟು 41 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ.

ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಸ್ವಾಗತಿಸಿ, ಪ್ರಾಸ್ತಾವಿಕ ನುಡಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಧನ್ಯವಾದವಿತ್ತರು.

Related posts

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!