24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ ಡಿ. 20 ರಂದು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪರಾಜ್ ವಹಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ|ಫಾ| ಬಿನೋಯಿ ಎ ಜೆ ಪ್ರಾಸ್ತಾವಿಕ ನುಡಿಯನ್ನಾಡಿದರು. ಮುಖ್ಯ ಅತಿಥಿಯಾಗಿ ಸೈಂಟ್ ಮೇರಿ ಚರ್ಚ್ ಇದರ ಸಹಾಯಕ ಧರ್ಮಗುರುಗಳಾದ ವಂದನೀಯ ಫಾದರ್ ಎಬಿನ್ ಕುರಿಯನ್ ಕ್ರಿಸ್ಮಸ್ ಕೇಕ್ ಕತ್ತರಿಸಿ ಕ್ರಿಸ್ಮಸ್ ಸಂದೇಶ ನೀಡಿದರು.

ಸಿಸ್ಟರ್ ಲೀನಾ ಮದರ್ ಸುಪಿರಿಯರ್ ಕುಟ್ರುಪ್ಪಾಡಿ ಕಾನ್ವೆಂಟ್, ಮಾತೃವೇದಿ ಸಂಘಟನೆಯ ಸಂಯೋಜಕರು ಮತ್ತು ಬೆಳ್ತಂಗಡಿ ಧರ್ಮಪ್ರಾಂತ್ಯದ ಪಿ.ಆರ್.ಒ ಹಾಗೂ ಮೀಡಿಯಾ ಅಪೋಸ್ಟೆಲೆಟ್ ಇದರ ನಿರ್ದೇಶಕರಾದ ವಂದನೀಯ ಫಾದರ್ ಮ್ಯಾಥ್ಯೂ ತಾಯೆ ಕಾಟೀಲ್ ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಮಾತೃವೇದಿ ಸಂಘಟನೆಯ ಅಧ್ಯಕ್ಷರು , ಅತಿಥಿ ಗಣ್ಯರು ಹಾಗೂ ಪದಾಧಿಕಾರಿಗಳು ನವಜೀವನ ಆರೈಕೆ ಬೆಂಬಲ ಕೇಂದ್ರದ ಸದಸ್ಯರಿಗೆ ಕ್ರಿಸ್ಮಸ್ ಕೇಕ್ ಮತ್ತು ಧನಸಹಾಯ ನೀಡಿದರು. ಮಾತೃವೇದಿ ಸಂಘಟನೆಯ ಅಧ್ಯಕ್ಷೆ ಶ್ರೀಮತಿ ವಲ್ಸಮ್ಮ ಎ ಜೆ ಇವರು ನವಜೀವನ ಲಕ್ಕಿ ಪರ್ಸನ್ ಆಫ್ ದಿ ಇಯರ್ 2025 ವಿಜೇತರಿಗೆ ಬಹುಮಾನ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಮಾತೃವೇದಿ ಸಂಘಟನೆ ಸದಸ್ಯರು ಮತ್ತು ನವಜೀವನ ಆರೈಕೆ ಬೆಂಬಲ ಕೆಂದ್ರದ ಸದಸ್ಯರು ಹಾಡನ್ನು ಹಾಡಿದರು.
ಡಿ.ಕೆ.ಆರ್.ಡಿ.ಎಸ್.ಸಂಸ್ಥೆಯ ವಿದ್ಯಾನಿಧಿ ಯೋಜನೆಯ ಸಂಯೋಜಕಿಯಾದ ಶ್ರೀಮತಿ ಜಿನಿ ಪಿಜೆ ಸ್ವಾಗತಿಸಿದರು. ಡಿ.ಕೆ.ಆರ್.ಡಿ.ಎಸ್.ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ ಸೋಜ ವಂದಿಸಿದರು. ಯೋಜನೆಯ ಸಂಯೋಜಕಿ ಕುಮಾರಿ ಶ್ರೇಯರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya
error: Content is protected !!