37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

ಇಂದಬೆಟ್ಟು : ಇಲ್ಲಿಯ ತುರ್ಕರೆಬೆಟ್ಟು ರಾಜೇಶ್ ಬಿನ್ ಉರ್ಮಿಶ್ ರವರ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ಡಿ.19 ರಂದು ತಡ ರಾತ್ರಿ ವೇಳೆಗೆ ಆಕಸ್ಮಿಕ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುತ್ತದೆ.

ಈ ಸಂದರ್ಭದಲ್ಲಿ ಸ್ಥಳೀಯರ ತುರ್ತು ಸಹಕಾರದಿಂದ ಹಟ್ಟಿಯಲ್ಲಿ ಕಟ್ಟಿದ್ದ ದನ ಹಾಗೂ ಕರುವನ್ನು ರಕ್ಷಿಸಲಾಗಿದೆ. ನೀರು ಹಾಕಿ ಬೆಂಕಿ ನಂದಿಸಲಾಗಿದೆ. ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಕೊಟ್ಟಿಗೆಯಲ್ಲಿ ಇದ್ದ ರಬ್ಬರ್ ಸೀಟ್, ಅಡಿಕೆ ಹಾಗೂ ಕೃಷಿ ಸಂಬಂಧಿತ ಉಪಕರಣಗಳು, ಮೇಲ್ಚಾವಣಿ ಸುಟ್ಟು ಹೋಗಿದೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಕಾಂತ್ ಎಸ್, ಶ್ರೀಮತಿ ಸುಮಿತ್ರಾ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya
error: Content is protected !!