37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ, ಉಜಿರೆ ಇದರ ಮಾತೃ ಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಡಿ. 19ರಂದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಮನೋರಮಾ ಭಟ್ ಅವರು, ಲೈಂಗಿಕ ಕಿರುಕುಳ ತಡೆಗಟ್ಟುವಲ್ಲಿ ಮಾನವ ಹಕ್ಕುಗಳ ಪಾತ್ರ, ಆಂತರಿಕ ದೂರು ಸಮಿತಿಯ ಮಹತ್ವ ಹಾಗೂ ಅದರ ಕಾರ್ಯನಿರ್ವಹಣೆಯ ಕುರಿತು ಸಮಗ್ರ ಮಾಹಿತಿ ನೀಡಿದರು. ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ ಧೈರ್ಯದಿಂದ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತಾ ಕೆ.ಜೆ. ವಹಿಸಿ, ವಿಷಯದ ಕುರಿತು ಜಾಗೃತಿ ಮೂಡಿಸಿ, ಹೆಣ್ಣು ಮಕ್ಕಳು ಆತ್ಮವಿಶ್ವಾಸದಿಂದ ಸಮಾಜವನ್ನು ಎದುರಿಸುವಲ್ಲಿ ಪ್ರಬಲರಾಗಬೇಕೆಂದು ಪ್ರೋತ್ಸಾಹಿಸಿದರು.

ಶಾಂತಿವನ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಬಿಂದು ಸ್ವಾಗತಿಸಿ, ಡಾ. ಮೇಘನಾ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!