September 6, 2026
ಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ 2025 -26ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಕ್ರಾಡಿ ಹೈಸ್ಕೂಲ್ ಬೆಟರ್ ಮೆಂಟ್ ಟ್ರಸ್ಟ್ಅಧ್ಯಕ್ಷ ದೇವೇಂದ್ರ ಹೆಗ್ಡೆ ವಹಿಸಿದ್ದರು.

ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಅಭಿಯಂತರರು ಶಿವಪ್ರಸಾದ್ ಅಜಿಲ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಶಿಧರ್ ಜಿ.ಎಸ್. , ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಕೊಕ್ರಾಡಿ ಹೈಸ್ಕೂಲ್ ಬೆಟರ್ಮೆಂಟ್ ಟ್ರಸ್ಟ್‌ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಕೊಕ್ರಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಉಪಾಧ್ಯಕ್ಷ ಮೋಹನ್ ಅಂಡಿಂಜೆ , ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಜಗದೀಶ್ ಹೆಗ್ಡೆ, ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪ್ರಾಂಶುಪಾಲರು ದಯಾನಂದ ಉಪಸ್ಥಿತರಿದ್ದರು.

ಈ ವೇಳೆ ನಿವೃತ್ತ ಮುಖ್ಯ ಅಭಿಯಂತರರು ಶಿವಪ್ರಸಾದ್ ಅಜಿಲ, ಶಾಲೆಯ ಹಿರಿಯ ವಿದ್ಯಾರ್ಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹರೀಶ್ , ಹಿರಿಯ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಹೆಗ್ಡೆ, ಜಗದೀಶ್ ಹೆಗ್ಡೆ, ಪರಮೇಶ್, ಸರೋಜಾ ಹಾಗೂ ಕಳೆದ ವರ್ಷ ಎಸ್ ಎಸ್. ಎಲ್. ಸಿ ಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ನಂತರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳಾಲು ಎಸ್.ಡಿ.ಎಂ ಮುಖ್ಯ ಶಿಕ್ಷಕ ಜಯರಾಮ್ ಮಯ್ಯ, ಎಸ್.ಡಿ.ಎಂ.ಸಿ ಗಣೇಶ್, ಲಕ್ಷ್ಮಣ ಪೂಜಾರಿ, ನೀಲಕಂಠ, ಶ್ರೀಮತಿ ಜಯಂತಿ ಲೋಕಯ್ಯ ಪೂಜಾರಿ, ಶಾಲಾ ಅಧ್ಯಾಪಕರಾದ ಶ್ರೀಮತಿ ಲವೀನಾ ವೀಣಾ ಡಯಾಸ್, ಶ್ರೀಮತಿ ಉಷಾರಾಣಿ, ಪ್ರಕಾಶ್ ಬಿ. ಆರ್ ಉಪಸ್ಥಿತರಿದ್ದರು.

ಶ್ರೀಮತಿ ಅಸ್ಮಾ ಸ್ವಾಗತಿಸಿ, ಮುಖ್ಯ ಶಿಕ್ಷಕ ಮಹಮದ್ ರಿಯಾಜ್ ಪ್ರಾಸ್ತವಿಕ ಮಾತು ಮತ್ತು ವರದಿ ವಾಚಿಸಿದರು.
ಶ್ರೀಮತಿ ವಿದ್ಯಾ ಧನ್ಯವಾದವಿತ್ತರು. ಶ್ರೀಮತಿ ಅಕ್ಕಮ್ಮ ನಿರೂಪಿಸಿದರು.

Related posts

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!