September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

ಗೇರುಕಟ್ಟೆ: ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ನಿರ್ದೇಶನದಂತೆ ಕಾಜೂರು ತಂಙಳ್ ರವರು ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಡಿ.19 ರಂದು ಅಧಿಕಾರ ಸ್ವೀಕರಿಸಿದರು.

ನಂತರ ದುಅ ನೆರವೇರಿಸಿ ಮಹಾಸಭೆ ನಡೆಸಿಕೊಟ್ಟರು. ಖತೀಬ್ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಗತ ವರ್ಷದ ವರದಿ ಮತ್ತು ಜಮಾ ಖರ್ಚಿನ ವಿವರವನ್ನು ಅಬ್ದುಲ್ ಕರೀಮ್ ಸಭೆಗೆ ಓದಿ ಹೇಳಿದರು.
ಮಹಾಸಭೆಯಲ್ಲಿ ಮೊಹಲ್ಲಾದ ಅಭಿವೃದ್ಧಿಗಾಗಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೆಲ ಸದಸ್ಯರು ಸಲಹೆಗಳನ್ನು ನೀಡಿದರು.


ಜಮಾಅತರ ಅಭಿಪ್ರಾಯ ಪಡೆದು ಹೊಸ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮುಪತ್ತಿಸ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಎಸ್ ಸೈಫುಲ್ಲ,ಕೋಶಾದಿಕಾರಿಯಾಗಿ ಅಬ್ದುಲ್ ಬಶೀರ್ ಟಿಂಬರ್ ಉಪಾದ್ಯಕ್ಷರಾಗಿ ಮೊಹಮ್ಮದ್ ಹನೀಫ್ ಬಿ.ಐ.,ಅಬ್ದುಲ್ಲ ಕುಂಙ ದಾರಿಮಿ, ಸದಸ್ಯರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಬಿ.ಕೆ ರವೂಫ್ ಹಾಜಿ,ಎನ್.ಎನ್ ಮಹಮ್ಮದ್, ಅಬ್ದುಲ್ಲ ಎಸ್ ಯು, ಅಬೂಬಕ್ಕರ್ ಕೆ.ಎಮ್ ,ಶರೀಫ್ ಜಿ ಆಯ್ಕೆಯಾದರು.

Related posts

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya
error: Content is protected !!