July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯ ಸೌಜನ್ಯ ಹೋರಾಟಗಾರರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದು. ಈ ದೂರು ನೀಡಲು ಒತ್ತಡ ಹಾಕಿ ನಡೆಸಿರುವ ಅಪರಾಧಿಕ ಪಿತೂರಿಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ರಕ್ಷಣೆ ನೀಡುವಂತೆ ಸೌಜನ್ಯ ಪರ ಹೋರಾಟಗಾರ ಜಯಂತ್‌ ಟಿ ಮುಖ್ಯಮಂತ್ರಿ ಯವರಿಗೆ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಡಿ.20 ರಂದು ಮನವಿ ಮಾಡಿದ್ದಾರೆ.

ಮನವಿಯಲ್ಲಿ ಏನಿದೆ: ಚಿನ್ನಯ್ಯ ಜಾಮೀನಿನ ಮೇಲೆ ಹೊರಬಂದು ಬಳಿಕ ಪೊಲೀಸರಿಗೆ ಸೌಜನ್ಯ ಪರ ಹೋರಾಟಗಾರರಿಂದ ತನಗೆ ಜೀವ ಭಯವಿದೆ ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿಕೊಂಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿದಿದೆ. ಕ್ರೈಂ ನಂ 39/2025ನ ಆರಂಭದ ದಿನಗಳಲ್ಲಿ ಚಿನ್ನಯ್ಯನೊಂದಿಗೆ ಮಾತುಕತೆಯಿದ್ದು ಅದಾದ ಬಳಿಕ ಆತನೊಂದಿಗೆ ಯಾವುದೇ ಸಂಪರ್ಕವಿರುವಯದಿಲ್ಲ.ಸಮೀರ್ ಎಂ.ಡಿ ವಿರುದ್ದ ದೂರು ನೀಡಿ ಪ್ರಕರಣವನ್ನು ಹಿಂದೂ ಮುಸ್ಲಿಂ ಮತೀಯ ವಿಚಾರವಾಗಿ ಪರಿವರ್ತಿಸುವ ಹುನ್ನಾರ ನಡೆಯುತ್ತಿದೆ.

ಅದೇರೀತಿ ಚಿನ್ನಯ್ಯನಿಗೆ ಯಾರಿಂದಲೋ ಅಪಾಯವುಂಟುಮಾಡಿ ಅದನ್ನು ಹೋರಾಟಗಾರರಾದ ನಮ್ಮ ಮೇಲೆ ಹಾಕಿ ಆಮೂಲಕ ಅನ್ಯಾಯವಾಗಿ ನಮ್ಮನ್ನು ಜೈಲಿಗೆ ಕಳುಹಿಸಿ ಸಾಕ್ಷ್ಯಗಳನ್ನು ನಾಶಮಾಡಲು ಹಾಗೂ ಪ್ರಕರಣದ ತನಿಖೆಯನ್ನು ಬೇರೆ ದಿಕ್ಕಿಗೆ ತಿರುಗಿಸಲು ದೊಡ್ಡ ಮಟ್ಟದಲ್ಲಿ ಪಿತೂರಿ ನಡೆಯುತ್ತಿರುವಯದರಿಂದ ದೂರುದಾರ ಚಿನ್ನಯ್ಯನಿಗೆ ಕೂಡಲೇ ಗನ್ ಮ್ಯಾನ್ ಒದಗಿಸಿ ಅವನು ಮತ್ತು ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ ಎಸ್.ಐ.ಟಿ ತನಿಖೆ ಮುಂದುವರಿಸಬೇಕು.

ಅದೇರೀತಿ ಚಿನ್ನಯ್ಯ ನೀಡಿದ ದೂರಿನ ಉದ್ದೇಶ ಹಾಗೂ ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಹಾಗೆಯೇ ದೂರು ನೀಡಲು ಇವರಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಒತ್ತಡ ಹಾಕಿ ಅಪರಾಧಿಕ ಪಿತೂರಿ ನಡೆಸಿದವರ ಬಗ್ಗೆ ತನಿಖೆ ನಡೆಸಬೇಕು ಎಂದು ಜಯಂತ್ ಟಿ ಮುಖ್ಯಮಂತ್ರಿಯವರಿಗೆ ಹಾಗು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಡಿ.20 ರಂದು ಸಲ್ಲಿಸಿರುವ ಮನವಿಯಲ್ಲಿ ಕೇಳಿಕೊಂಡಿದ್ದಾರೆ.

Related posts

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!