25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯ ಸೌಜನ್ಯ ಹೋರಾಟಗಾರರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದು. ಈ ದೂರು ನೀಡಲು ಒತ್ತಡ ಹಾಕಿ ನಡೆಸಿರುವ ಅಪರಾಧಿಕ ಪಿತೂರಿಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ರಕ್ಷಣೆ ನೀಡುವಂತೆ ಸೌಜನ್ಯ ಪರ ಹೋರಾಟಗಾರ ಜಯಂತ್‌ ಟಿ ಮುಖ್ಯಮಂತ್ರಿ ಯವರಿಗೆ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಡಿ.20 ರಂದು ಮನವಿ ಮಾಡಿದ್ದಾರೆ.

ಮನವಿಯಲ್ಲಿ ಏನಿದೆ: ಚಿನ್ನಯ್ಯ ಜಾಮೀನಿನ ಮೇಲೆ ಹೊರಬಂದು ಬಳಿಕ ಪೊಲೀಸರಿಗೆ ಸೌಜನ್ಯ ಪರ ಹೋರಾಟಗಾರರಿಂದ ತನಗೆ ಜೀವ ಭಯವಿದೆ ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿಕೊಂಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿದಿದೆ. ಕ್ರೈಂ ನಂ 39/2025ನ ಆರಂಭದ ದಿನಗಳಲ್ಲಿ ಚಿನ್ನಯ್ಯನೊಂದಿಗೆ ಮಾತುಕತೆಯಿದ್ದು ಅದಾದ ಬಳಿಕ ಆತನೊಂದಿಗೆ ಯಾವುದೇ ಸಂಪರ್ಕವಿರುವಯದಿಲ್ಲ.ಸಮೀರ್ ಎಂ.ಡಿ ವಿರುದ್ದ ದೂರು ನೀಡಿ ಪ್ರಕರಣವನ್ನು ಹಿಂದೂ ಮುಸ್ಲಿಂ ಮತೀಯ ವಿಚಾರವಾಗಿ ಪರಿವರ್ತಿಸುವ ಹುನ್ನಾರ ನಡೆಯುತ್ತಿದೆ.

ಅದೇರೀತಿ ಚಿನ್ನಯ್ಯನಿಗೆ ಯಾರಿಂದಲೋ ಅಪಾಯವುಂಟುಮಾಡಿ ಅದನ್ನು ಹೋರಾಟಗಾರರಾದ ನಮ್ಮ ಮೇಲೆ ಹಾಕಿ ಆಮೂಲಕ ಅನ್ಯಾಯವಾಗಿ ನಮ್ಮನ್ನು ಜೈಲಿಗೆ ಕಳುಹಿಸಿ ಸಾಕ್ಷ್ಯಗಳನ್ನು ನಾಶಮಾಡಲು ಹಾಗೂ ಪ್ರಕರಣದ ತನಿಖೆಯನ್ನು ಬೇರೆ ದಿಕ್ಕಿಗೆ ತಿರುಗಿಸಲು ದೊಡ್ಡ ಮಟ್ಟದಲ್ಲಿ ಪಿತೂರಿ ನಡೆಯುತ್ತಿರುವಯದರಿಂದ ದೂರುದಾರ ಚಿನ್ನಯ್ಯನಿಗೆ ಕೂಡಲೇ ಗನ್ ಮ್ಯಾನ್ ಒದಗಿಸಿ ಅವನು ಮತ್ತು ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ ಎಸ್.ಐ.ಟಿ ತನಿಖೆ ಮುಂದುವರಿಸಬೇಕು.

ಅದೇರೀತಿ ಚಿನ್ನಯ್ಯ ನೀಡಿದ ದೂರಿನ ಉದ್ದೇಶ ಹಾಗೂ ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಹಾಗೆಯೇ ದೂರು ನೀಡಲು ಇವರಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಒತ್ತಡ ಹಾಕಿ ಅಪರಾಧಿಕ ಪಿತೂರಿ ನಡೆಸಿದವರ ಬಗ್ಗೆ ತನಿಖೆ ನಡೆಸಬೇಕು ಎಂದು ಜಯಂತ್ ಟಿ ಮುಖ್ಯಮಂತ್ರಿಯವರಿಗೆ ಹಾಗು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಡಿ.20 ರಂದು ಸಲ್ಲಿಸಿರುವ ಮನವಿಯಲ್ಲಿ ಕೇಳಿಕೊಂಡಿದ್ದಾರೆ.

Related posts

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya
error: Content is protected !!