July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಡಿ. 29ರಂದು ಶುಭಾರಂಭಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ.

ಇದು ಸಂಘದ ಆಡಳಿತ ಮಂಡಳಿಯ ಬಹುದಿನಗಳ ಕನಸಾಗಿದ್ದು ತನ್ನ ಚುನಾವಣಾ ಪ್ರಣಾಲಿಕೆಯಲ್ಲೂ ಜನೌಷಧಿ ಕೇಂದ್ರ ಸಂಘದ ಕಟ್ಟಡದಲ್ಲಿ ಸ್ಥಾಪಿಸುವುದಾಗಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ತಿಳಿಸಿದ್ದರು. ಅದರಂತೆ ಡಿ. 29 ರಂದು ಜನೌಷಧಿ ಕೇಂದ್ರ ಉದ್ಘಾಟನೆಗೊಳ್ಳಲಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲ್ಯಾನ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ರಾವ್ ಅಂಗಡಿತೋಟ ಹಾಗೂ ಸಂಘದ ನಿರ್ದೇಶಕರು ಮತ್ತು ಸರ್ವ ಸದಸ್ಯರು, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ., ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ, ಶಿಬಾಜೆ ಗ್ರಾ.ಪಂ. ಅಧ್ಯಕ್ಷೆ ರತ್ನಾ, ಪಂಚಾಯತ್ ನ ಉಪಾಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿರಲಿದ್ದಾರೆ.

Related posts

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya
error: Content is protected !!