July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya
error: Content is protected !!