37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

ಮುಂಡಾಜೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು, ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಡಿ. 20ರಂದು ನಡೆದಿದೆ.

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಏಕಾಏಕಿ ರಸ್ತೆಯ ಬಲಬದಿಗೆ ಚಲಿಸಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಧರ್ಮಸ್ಥಳದಿಂದ ಕುಕನೂರಿಗೆ ಸಂಚಾರ ನಡೆಸುವ ಕೆಎಸ್ಸಾರ್ಟಿಸಿ ಬಸ್ ನ ಎಡಬದಿಗೆ ಡಿಕ್ಕಿ ಹೊಡೆದು ಸುಮಾರು 50 ಮೀ.ದೂರದವರೆಗೆ ಹೋಗಿ ಧರೆಗೆ ಗುದ್ದಿ ಉರುಳಿ ಬಿದಿದ್ದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಸ್ ಪ್ರಯಾಣಿಕರನ್ನು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಬಸ್ ಗಳಲ್ಲಿ ಕಳುಹಿಸಿಕೊಡಲಾಯಿತು.

Related posts

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!