25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

ಮುಂಡಾಜೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು, ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಡಿ. 20ರಂದು ನಡೆದಿದೆ.

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಏಕಾಏಕಿ ರಸ್ತೆಯ ಬಲಬದಿಗೆ ಚಲಿಸಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಧರ್ಮಸ್ಥಳದಿಂದ ಕುಕನೂರಿಗೆ ಸಂಚಾರ ನಡೆಸುವ ಕೆಎಸ್ಸಾರ್ಟಿಸಿ ಬಸ್ ನ ಎಡಬದಿಗೆ ಡಿಕ್ಕಿ ಹೊಡೆದು ಸುಮಾರು 50 ಮೀ.ದೂರದವರೆಗೆ ಹೋಗಿ ಧರೆಗೆ ಗುದ್ದಿ ಉರುಳಿ ಬಿದಿದ್ದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಸ್ ಪ್ರಯಾಣಿಕರನ್ನು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಬಸ್ ಗಳಲ್ಲಿ ಕಳುಹಿಸಿಕೊಡಲಾಯಿತು.

Related posts

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!