23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

ಮುಂಡಾಜೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು, ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಡಿ. 20ರಂದು ನಡೆದಿದೆ.

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಏಕಾಏಕಿ ರಸ್ತೆಯ ಬಲಬದಿಗೆ ಚಲಿಸಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಧರ್ಮಸ್ಥಳದಿಂದ ಕುಕನೂರಿಗೆ ಸಂಚಾರ ನಡೆಸುವ ಕೆಎಸ್ಸಾರ್ಟಿಸಿ ಬಸ್ ನ ಎಡಬದಿಗೆ ಡಿಕ್ಕಿ ಹೊಡೆದು ಸುಮಾರು 50 ಮೀ.ದೂರದವರೆಗೆ ಹೋಗಿ ಧರೆಗೆ ಗುದ್ದಿ ಉರುಳಿ ಬಿದಿದ್ದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಸ್ ಪ್ರಯಾಣಿಕರನ್ನು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಬಸ್ ಗಳಲ್ಲಿ ಕಳುಹಿಸಿಕೊಡಲಾಯಿತು.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!