September 6, 2026
ಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ 2025 -26ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಕ್ರಾಡಿ ಹೈಸ್ಕೂಲ್ ಬೆಟರ್ ಮೆಂಟ್ ಟ್ರಸ್ಟ್ಅಧ್ಯಕ್ಷ ದೇವೇಂದ್ರ ಹೆಗ್ಡೆ ವಹಿಸಿದ್ದರು.

ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಅಭಿಯಂತರರು ಶಿವಪ್ರಸಾದ್ ಅಜಿಲ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಶಿಧರ್ ಜಿ.ಎಸ್. , ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಕೊಕ್ರಾಡಿ ಹೈಸ್ಕೂಲ್ ಬೆಟರ್ಮೆಂಟ್ ಟ್ರಸ್ಟ್‌ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಕೊಕ್ರಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಉಪಾಧ್ಯಕ್ಷ ಮೋಹನ್ ಅಂಡಿಂಜೆ , ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಜಗದೀಶ್ ಹೆಗ್ಡೆ, ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪ್ರಾಂಶುಪಾಲರು ದಯಾನಂದ ಉಪಸ್ಥಿತರಿದ್ದರು.

ಈ ವೇಳೆ ನಿವೃತ್ತ ಮುಖ್ಯ ಅಭಿಯಂತರರು ಶಿವಪ್ರಸಾದ್ ಅಜಿಲ, ಶಾಲೆಯ ಹಿರಿಯ ವಿದ್ಯಾರ್ಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹರೀಶ್ , ಹಿರಿಯ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಹೆಗ್ಡೆ, ಜಗದೀಶ್ ಹೆಗ್ಡೆ, ಪರಮೇಶ್, ಸರೋಜಾ ಹಾಗೂ ಕಳೆದ ವರ್ಷ ಎಸ್ ಎಸ್. ಎಲ್. ಸಿ ಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ನಂತರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳಾಲು ಎಸ್.ಡಿ.ಎಂ ಮುಖ್ಯ ಶಿಕ್ಷಕ ಜಯರಾಮ್ ಮಯ್ಯ, ಎಸ್.ಡಿ.ಎಂ.ಸಿ ಗಣೇಶ್, ಲಕ್ಷ್ಮಣ ಪೂಜಾರಿ, ನೀಲಕಂಠ, ಶ್ರೀಮತಿ ಜಯಂತಿ ಲೋಕಯ್ಯ ಪೂಜಾರಿ, ಶಾಲಾ ಅಧ್ಯಾಪಕರಾದ ಶ್ರೀಮತಿ ಲವೀನಾ ವೀಣಾ ಡಯಾಸ್, ಶ್ರೀಮತಿ ಉಷಾರಾಣಿ, ಪ್ರಕಾಶ್ ಬಿ. ಆರ್ ಉಪಸ್ಥಿತರಿದ್ದರು.

ಶ್ರೀಮತಿ ಅಸ್ಮಾ ಸ್ವಾಗತಿಸಿ, ಮುಖ್ಯ ಶಿಕ್ಷಕ ಮಹಮದ್ ರಿಯಾಜ್ ಪ್ರಾಸ್ತವಿಕ ಮಾತು ಮತ್ತು ವರದಿ ವಾಚಿಸಿದರು.
ಶ್ರೀಮತಿ ವಿದ್ಯಾ ಧನ್ಯವಾದವಿತ್ತರು. ಶ್ರೀಮತಿ ಅಕ್ಕಮ್ಮ ನಿರೂಪಿಸಿದರು.

Related posts

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!