25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

ಗೇರುಕಟ್ಟೆ: ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ನಿರ್ದೇಶನದಂತೆ ಕಾಜೂರು ತಂಙಳ್ ರವರು ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಡಿ.19 ರಂದು ಅಧಿಕಾರ ಸ್ವೀಕರಿಸಿದರು.

ನಂತರ ದುಅ ನೆರವೇರಿಸಿ ಮಹಾಸಭೆ ನಡೆಸಿಕೊಟ್ಟರು. ಖತೀಬ್ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಗತ ವರ್ಷದ ವರದಿ ಮತ್ತು ಜಮಾ ಖರ್ಚಿನ ವಿವರವನ್ನು ಅಬ್ದುಲ್ ಕರೀಮ್ ಸಭೆಗೆ ಓದಿ ಹೇಳಿದರು.
ಮಹಾಸಭೆಯಲ್ಲಿ ಮೊಹಲ್ಲಾದ ಅಭಿವೃದ್ಧಿಗಾಗಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೆಲ ಸದಸ್ಯರು ಸಲಹೆಗಳನ್ನು ನೀಡಿದರು.


ಜಮಾಅತರ ಅಭಿಪ್ರಾಯ ಪಡೆದು ಹೊಸ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮುಪತ್ತಿಸ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಎಸ್ ಸೈಫುಲ್ಲ,ಕೋಶಾದಿಕಾರಿಯಾಗಿ ಅಬ್ದುಲ್ ಬಶೀರ್ ಟಿಂಬರ್ ಉಪಾದ್ಯಕ್ಷರಾಗಿ ಮೊಹಮ್ಮದ್ ಹನೀಫ್ ಬಿ.ಐ.,ಅಬ್ದುಲ್ಲ ಕುಂಙ ದಾರಿಮಿ, ಸದಸ್ಯರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಬಿ.ಕೆ ರವೂಫ್ ಹಾಜಿ,ಎನ್.ಎನ್ ಮಹಮ್ಮದ್, ಅಬ್ದುಲ್ಲ ಎಸ್ ಯು, ಅಬೂಬಕ್ಕರ್ ಕೆ.ಎಮ್ ,ಶರೀಫ್ ಜಿ ಆಯ್ಕೆಯಾದರು.

Related posts

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya
error: Content is protected !!