July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

ಗೇರುಕಟ್ಟೆ: ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ನಿರ್ದೇಶನದಂತೆ ಕಾಜೂರು ತಂಙಳ್ ರವರು ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಡಿ.19 ರಂದು ಅಧಿಕಾರ ಸ್ವೀಕರಿಸಿದರು.

ನಂತರ ದುಅ ನೆರವೇರಿಸಿ ಮಹಾಸಭೆ ನಡೆಸಿಕೊಟ್ಟರು. ಖತೀಬ್ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಗತ ವರ್ಷದ ವರದಿ ಮತ್ತು ಜಮಾ ಖರ್ಚಿನ ವಿವರವನ್ನು ಅಬ್ದುಲ್ ಕರೀಮ್ ಸಭೆಗೆ ಓದಿ ಹೇಳಿದರು.
ಮಹಾಸಭೆಯಲ್ಲಿ ಮೊಹಲ್ಲಾದ ಅಭಿವೃದ್ಧಿಗಾಗಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕೆಲ ಸದಸ್ಯರು ಸಲಹೆಗಳನ್ನು ನೀಡಿದರು.


ಜಮಾಅತರ ಅಭಿಪ್ರಾಯ ಪಡೆದು ಹೊಸ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮುಪತ್ತಿಸ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಅಲ್ ಅಫ್ಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಎಸ್ ಸೈಫುಲ್ಲ,ಕೋಶಾದಿಕಾರಿಯಾಗಿ ಅಬ್ದುಲ್ ಬಶೀರ್ ಟಿಂಬರ್ ಉಪಾದ್ಯಕ್ಷರಾಗಿ ಮೊಹಮ್ಮದ್ ಹನೀಫ್ ಬಿ.ಐ.,ಅಬ್ದುಲ್ಲ ಕುಂಙ ದಾರಿಮಿ, ಸದಸ್ಯರುಗಳಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ,ಬಿ.ಕೆ ರವೂಫ್ ಹಾಜಿ,ಎನ್.ಎನ್ ಮಹಮ್ಮದ್, ಅಬ್ದುಲ್ಲ ಎಸ್ ಯು, ಅಬೂಬಕ್ಕರ್ ಕೆ.ಎಮ್ ,ಶರೀಫ್ ಜಿ ಆಯ್ಕೆಯಾದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya
error: Content is protected !!