23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಡಿ. 29ರಂದು ಶುಭಾರಂಭಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ.

ಇದು ಸಂಘದ ಆಡಳಿತ ಮಂಡಳಿಯ ಬಹುದಿನಗಳ ಕನಸಾಗಿದ್ದು ತನ್ನ ಚುನಾವಣಾ ಪ್ರಣಾಲಿಕೆಯಲ್ಲೂ ಜನೌಷಧಿ ಕೇಂದ್ರ ಸಂಘದ ಕಟ್ಟಡದಲ್ಲಿ ಸ್ಥಾಪಿಸುವುದಾಗಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ತಿಳಿಸಿದ್ದರು. ಅದರಂತೆ ಡಿ. 29 ರಂದು ಜನೌಷಧಿ ಕೇಂದ್ರ ಉದ್ಘಾಟನೆಗೊಳ್ಳಲಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲ್ಯಾನ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ರಾವ್ ಅಂಗಡಿತೋಟ ಹಾಗೂ ಸಂಘದ ನಿರ್ದೇಶಕರು ಮತ್ತು ಸರ್ವ ಸದಸ್ಯರು, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ., ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ, ಶಿಬಾಜೆ ಗ್ರಾ.ಪಂ. ಅಧ್ಯಕ್ಷೆ ರತ್ನಾ, ಪಂಚಾಯತ್ ನ ಉಪಾಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿರಲಿದ್ದಾರೆ.

Related posts

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya
error: Content is protected !!