25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya
error: Content is protected !!