23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!