ಧರ್ಮಸ್ಥಳ ಗ್ರಾಮ ಪಂಚಾಯಿತಿನ 2024-25 ನೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆ ಮತ್ತು ರಾಜ್ಯ ಹಣಕಾಸು ಆಯೋಗದ ಐದು ವರ್ಷದ ಕಾಮಗಾರಿಗಳ ಸಾಮಾಜಿಕ ಪರಿಶೋಧನೆ ಡಿ.20 ರಿಂದ ಡಿ.29 ರ ತನಕ ನಡೆಯಲಿದ್ದು ಈ ಬಗ್ಗೆ ಧರ್ಮಸ್ಥಳ ಗ್ರಾಮ್ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಇವರ ಆದ್ಯತೆಯಲ್ಲಿ ಪೂರ್ವಭಾವಿ ಸಭೆ ಧರ್ಮಸ್ಥಳ ಗ್ರಾಮ್ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಾಮಾಜಿಕ ಪರಿಶೋಧನೆ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲೀಲಾವತಿಯವರು ಉದ್ದೇಶ ಹಾಗೂ ವಿವರಗಳನ್ನು ಸಭೆಗೆ ತಿಳಿಸಿದರು. ಡಿ. 29ರಂದು ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ನಡೆಯಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ ಶ್ರೀನಿವಾಸ ರಾವ್, ಸಾಮಾಜಿಕ ಪರಿಶೋಧನೆ ಗ್ರಾಮ ಸಂಪನ್ಮೂಲ ಸಿಬ್ಬಂದಿಗಳಾದ ಸುಮಲತಾ, ಉಷಾಲತಾ, ವಿದ್ಯಾ ಶ್ರೀ, ಈಶ್ವರಿ, ಸುಚೇತನ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಧನ್ಯವಾದ ನೀಡಿದರು.











