July 23, 2026
Uncategorized

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

ಮುಂಡಾಜೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು, ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಡಿ. 20ರಂದು ನಡೆದಿದೆ.

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಏಕಾಏಕಿ ರಸ್ತೆಯ ಬಲಬದಿಗೆ ಚಲಿಸಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಧರ್ಮಸ್ಥಳದಿಂದ ಕುಕನೂರಿಗೆ ಸಂಚಾರ ನಡೆಸುವ ಕೆಎಸ್ಸಾರ್ಟಿಸಿ ಬಸ್ ನ ಎಡಬದಿಗೆ ಡಿಕ್ಕಿ ಹೊಡೆದು ಸುಮಾರು 50 ಮೀ.ದೂರದವರೆಗೆ ಹೋಗಿ ಧರೆಗೆ ಗುದ್ದಿ ಉರುಳಿ ಬಿದಿದ್ದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಸ್ ಪ್ರಯಾಣಿಕರನ್ನು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ಬಸ್ ಗಳಲ್ಲಿ ಕಳುಹಿಸಿಕೊಡಲಾಯಿತು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!