25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆಯು ಡಿ.20 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್. ಎಸ್ ಕಾರ್ಯಕ್ರಮ ಉದ್ಘಾಟನೆ ನಡೆಸಿದರು.

ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ಧರ್ಮಸ್ಥಳ ದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯ ಕಾರ್ಯಕ್ರಮವಾಗಿದೆ. ರಾಜ್ಯದ 91 ತಾಲ್ಲೂಕಿನ ಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಲಾಗಿದ್ದು 10,300 ಸ್ವಯಂಸೇವಕರು ನೋಂದಣಿ ಮಾಡಿಕೊಂಡಿದ್ದಾರೆ. ವಿಪತ್ತು ನಿರ್ವಹಣಾ ಕಾರ್ಯಕ್ರಮ ಲೋಕಾರ್ಪಣೆಗೊಂಡು ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪೂಜ್ಯರು ಪ್ರತಿ ಸ್ವಯಂಸೇವಕರಿಗೆ ಬ್ಯಾಗ್ ವಿತರಣೆಗೆ ಮಂಜೂರಾತಿ ಮಾಡಿದ್ದಾರೆ ಎಂದರು.

ನಮಗೆ ಸೇವೆ ಮತ್ತು ಸೇನೆ ಎಂದರೆ ನೆನಪಾಗುವುದು ವಾನರ ಸೇನೆ. ಒಂದು ಆದರ್ಶವನ್ನು ಒಪ್ಪಿಕೊಂಡು, ನಿಸ್ವಾರ್ಥ ಸೇವೆಯನ್ನು, ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೇ ವಾನರ ಸೇವೆ ಕೆಲಸ ಮಾಡಿತ್ತು ಎಂದು ನಮಗೆ ಪುರಾಣಗಳು ಹೇಳುತ್ತವೆ. ವಾನರ ಸೇನೆಯಂತೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಾಜದ ಒಳಿತಿಗಾಗಿ, ಜನರ ಕಷ್ಟದಲ್ಲಿ ನೆರವಾಗುವ ಉದ್ದೇಶ ಹೊಂದಿದ್ದು ನಿಸ್ವಾರ್ಥದಿಂದ ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೇ ಕೆಲಸ ಮಾಡುತ್ತಿದ್ದಾರೆ ಎಂದರು.

ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ಮಾತನಾಡಿ ಶೌರ್ಯ ತಂಡದ ಸದಸ್ಯರು ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆಯ ಜೊತೆಗೆ ಅನೇಕ ಕಾರ್ಯಾಚರಣೆ ಗಳಲ್ಲಿ ಪಾಲ್ಗೊಂಡು ಶ್ಲಾಘನೆಗೆ ಪಾತ್ರವಾಗಿದೆ ಎಂದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ 300 ಸ್ವಯಂಸೇವಕರಿಗೆ ಬ್ಯಾಗ್ ವಿತರಣೆ ಮಾಡಲಾಯಿತು.

ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಿಗೆ ಪ್ರಾಕೃತಿಕ ದುರಂತಗಳ ನಿರ್ವಹಣೆ ಎನ್ನುವ ಪುಸ್ತಕ ವಿತರಣೆ ಮಾಡಲಾಯಿತು.

ಶೌರ್ಯ ಸಮಿತಿಗೆ ಮಾಸ್ಟರ್ ಮತ್ತು ಕ್ಯಾಪ್ಟನ್ ಆಯ್ಕೆ ಪ್ರಕ್ರಿಯೆ ಇದೇ ಸಮಯದಲ್ಲಿ ನಡೆಸಲಾಯಿತು. ಬೆಳ್ತಂಗಡಿ ಸಮಿತಿಗೆ ಮಾಸ್ಟರ್ ಆಗಿ ಅವಿನಾಶ್ ಅರಶಿನಮಕ್ಕಿ ಹಾಗೂ ಕ್ಯಾಪ್ಟನ್ ಆಗಿ ರವೀಂದ್ರ ಉಜಿರೆ ಇವರು ಮತ್ತು ಗುರುವಾಯನಕೆರೆ ಸಮಿತಿಯ ಮಾಸ್ಟರ್ ಆಗಿ ಸತೀಶ್ ಆಚಾರ್ಯ, ಕ್ಯಾಪ್ಟನ್ ಆಗಿ ವಿಶ್ವನಾಥ ಇವರು ಸರ್ವಾನುಮತದಿಂದ ಆಯ್ಕೆಯಾದರು.

ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ, ಕಿಶೋರ್ ಕುಮಾರ್, ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಯಶೋಧರ, ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್, ಜನಜಾಗೃತಿ ಆಡಳಿತ ಯೋಜನಾಧಿಕಾರಿ ಮಾಧವ ಗೌಡ, ಮೇಲ್ವಿಚಾರಕ ನಿತೇಶ್ ಉಪಸ್ಥಿತರಿದ್ದರು.

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ಸಂಯೋಜಕರು, ಘಟಕ ಪ್ರತಿನಿಧಿಗಳು, ಹಾಗೂ 350 ಮಂದಿ ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!