24 C
ಪುತ್ತೂರು, ಬೆಳ್ತಂಗಡಿ
July 25, 2026
ತಾಲೂಕು ಸುದ್ದಿ

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

ಧಮ೯ಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಅನುದಾನದಲ್ಲಿ ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗೆ 2.41 ಕೋಟಿ ರೂ. ಮಂಜೂರಾಗಿದ್ದು ಕಾಮಗಾರಿಗೆ ಶಿಲಾನ್ಯಾಸ ಡಿ.21 ಅಮೃತವರ್ಷಿಣಿ ಸಭಾಭವನದ ಬಳಿ ಇರುವ ಮೈದಾನದಲ್ಲಿ ನಡೆಯಿತು.

ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಮಾಡಿದ ಶಾಸಕ ಹರೀಶ್ ಪೂಂಜ ಮಾತನಾಡಿ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕಂಡ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸು ದೇಶದೆಲ್ಲೆಡೆ ನನಸಾಗುತ್ತಿದೆ. ಅಶೋಕನಗರದಲ್ಲಿ ರಸ್ತೆ, ಬೀದಿದೀಪ, ಚರಂಡಿ ವ್ಯವಸ್ಥೆ, ಸ್ವಚ್ಛತೆ ಮೊದಲಾದ ಮೂಲಭೂತ ಸೌಕರ್ಯಗಳ ಪೂರೈಕೆಗಾಗಿ ಪೂಜ್ಯ ಹೆಗ್ಗಡೆಯವರು 2.41 ಕೋಟಿ ರೂ. ಅನುದಾನ ಮಂಜೂರು ಮಾಡಿರುವುದಕ್ಕೆ ಕೃತಜ್ಞತೆ ಅರ್ಪಿಸಿದರು.
ಅನುದಾನ ಮಂಜೂರಾತಿಗೆ ಸಹಕರಿಸಿದ ರಾಜ್ಯಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್. ಜನಾರ್ದನ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಅವರ ಸಕ್ರಿಯ ಸಹಕಾರಕ್ಕಾಗಿ ಶಾಸಕರು ಅಭಿನಂದಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದನ್‌ಪ್ರಸಾದ್ ಕಾಮತ್ ಮತ್ತು ರಾಜ್ಯಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್. ಜನಾರ್ದನ್ ಶುಭಾಶಂಸನೆ ಮಾಡಿದರು.
ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಮಾತನಾಡಿ ಅಶೋಕನಗರದ ಸರ್ವತೋಮುಖ ಪ್ರಗತಿಯ ಕನಸು ನನಸಾಗುವ ಸುವರ್ಣಾವಕಾಶ ಒದಗಿ ಬಂದಿದೆ. “ಹಿಂದುಳಿದವರು ಎಂಬ ಪದವನ್ನೇ ಅಳಿಸಿ ಎಲ್ಲರೂ ಮುಂದುವರಿದವರು ಆಗಬೇಕು ಎಂಬುದು ಪೂಜ್ಯ ಹೆಗ್ಗಡೆಯವರ ಆಶಯವಾಗಿದೆ. ಅಶೋಕನಗರವು “ಸಾಮ್ರಾಟ್ ಅಶೋಕನಗರ” ವಾಗಿ ಬೆಳೆಯಲಿ, ಬೆಳಗಲಿ ಎಂದು ಹಾರೈಸಿದರು.


ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಮಲಾ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಧರ್ಮಸ್ಥಳ, ನಿರ್ಮಿತಿ ಕೇಂದ್ರದ ಎಂಜಿನಿಯರ್ ನವೀನ್, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್, ಬೀಡಿನ ಪ್ರಬಂಧಕ ರಾಜೇಂದ್ರ ದಾಸ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಧನಲಕ್ಷೀ ಜನಾರ್ದನ್, ಗ್ರಾಮ ಪಂಚಾಯತ್ ಸದಸ್ಯೆ ಸುನೀತಾ,ಅಶೋಕನಗರದ ಗುರಿಕಾರ ಕರಿಯ ಗುರಿಕಾರ ಮತ್ತು ಒತ್ತು ಗುರಿಕಾರ ಸದಾಶಿವ, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬಂದಿ ವಗ೯ದವರು, ಅಶೋಕ ನಗರದ‌ ನಾಗರಿಕರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸ್ವಾಗತಿಸಿದರು. ಪಿ.ಡಿ.ಒ. ಗಾಯತ್ರಿ ಧನ್ಯವಾದವಿತ್ತರು. ದೇವಿಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya
error: Content is protected !!