25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಅಮೃತ ಮಹೋತ್ಸವ ಹಾಗೂ ಸುಜ್ಞಾನ ಸಭಾಂಗಣ ಲೋಕಾರ್ಪಣೆ ಕಾರ್ಯಕ್ರಮವು ಡಿ.21ರಂದು ಜರುಗಿತು.

ಬದನಾಜೆ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ರವರು ಧ್ವಜಾರೋಹಣ ಹಾಗೂ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ರವರು ಸುಜ್ಞಾನ ಸಭಾಂಗಣದ ಲೋಕಾರ್ಪಣೆ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ನೆರವೇರಿಸಿದರು. ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಭಟ್ ಅವರು ಅಮೃತ ಪಥ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ವೇದಿಕೆಯಲ್ಲಿ ಸೀತಾರಾಮ ಶೆಟ್ಟಿ ಎಸ್.ಕೆ.ಡಿ.ಆರ್.ಡಿ.ಪಿ, ನಿವೃತ್ತ ಶಿಕ್ಷಕ ಬಾಬು ಗೌಡ, ಸನತ್ ಕುಮಾರ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ಅನಿಲ್ ಡಿಸೋಜ, ಅರುಣಾಕ್ಷಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಂಜುನಾಥ್, ಬಿ.ಎಂ. ಇಲ್ಯಾಸ್, ಶೀನ ನಾಯ್ಕ, ಲಲಿತ, ಗುರುಪ್ರಸಾದ್, ನಾಗವೇಣಿ, ಸವಿತಾ ಉಪಸ್ಥಿತರಿದ್ದರು.

ನಿವೃತ್ತ ಶಿಕ್ಷಕರಿಗೆ ಹಾಗೂ ಪ್ರಸ್ತುತ ಶಿಕ್ಷಕರಿಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಗೌರವ ಶಿಕ್ಷಕರಿಗೆ ಗೌರವ ಸಮರ್ಪಣೆ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಾಗೂ ಅಡುಗೆ ಸಿಬ್ಬಂದಿಗಳನ್ನೂ ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ, ಶಿಕ್ಷಕ ಗೋಪಾಲ್ ಸಂಚಿಕೆಯ ಪರಿಚಯವನ್ನು ತಿಳಿಸಿದರು.

ಮುಖ್ಯೋಪಾಧ್ಯಾಯ ನಿರಂಜನ್ ಪ್ರಸ್ತಾವಿಸಿ, ಸ್ವಾಗತಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಜಮುನ ಕೆ.ಎಸ್. ವರದಿ ಮಂಡಿಸಿದರು. ಶಿಕ್ಷಕಿ ಪ್ರೀತಿ ಸಂದೇಶ ವಾಚಿಸಿದರು. ಶಿಕ್ಷಕರಾದ ಜಯಲಕ್ಷ್ಮಿ ಮತ್ತು ಜಯರಾಮ ನಿರೂಪಿಸಿದರು. ದೈಹಿಕ ಶಿಕ್ಷಕ ವಿಠಲ ನಾಯ್ಕ ವಂದಿಸಿದರು.

Related posts

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya
error: Content is protected !!