July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಅಮೃತ ಮಹೋತ್ಸವ ಹಾಗೂ ಸುಜ್ಞಾನ ಸಭಾಂಗಣ ಲೋಕಾರ್ಪಣೆ ಕಾರ್ಯಕ್ರಮವು ಡಿ.21ರಂದು ಜರುಗಿತು.

ಬದನಾಜೆ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರು, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ರವರು ಧ್ವಜಾರೋಹಣ ಹಾಗೂ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ರವರು ಸುಜ್ಞಾನ ಸಭಾಂಗಣದ ಲೋಕಾರ್ಪಣೆ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ನೆರವೇರಿಸಿದರು. ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಭಟ್ ಅವರು ಅಮೃತ ಪಥ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ವೇದಿಕೆಯಲ್ಲಿ ಸೀತಾರಾಮ ಶೆಟ್ಟಿ ಎಸ್.ಕೆ.ಡಿ.ಆರ್.ಡಿ.ಪಿ, ನಿವೃತ್ತ ಶಿಕ್ಷಕ ಬಾಬು ಗೌಡ, ಸನತ್ ಕುಮಾರ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ಅನಿಲ್ ಡಿಸೋಜ, ಅರುಣಾಕ್ಷಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಂಜುನಾಥ್, ಬಿ.ಎಂ. ಇಲ್ಯಾಸ್, ಶೀನ ನಾಯ್ಕ, ಲಲಿತ, ಗುರುಪ್ರಸಾದ್, ನಾಗವೇಣಿ, ಸವಿತಾ ಉಪಸ್ಥಿತರಿದ್ದರು.

ನಿವೃತ್ತ ಶಿಕ್ಷಕರಿಗೆ ಹಾಗೂ ಪ್ರಸ್ತುತ ಶಿಕ್ಷಕರಿಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಗೌರವ ಶಿಕ್ಷಕರಿಗೆ ಗೌರವ ಸಮರ್ಪಣೆ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಾಗೂ ಅಡುಗೆ ಸಿಬ್ಬಂದಿಗಳನ್ನೂ ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ, ಶಿಕ್ಷಕ ಗೋಪಾಲ್ ಸಂಚಿಕೆಯ ಪರಿಚಯವನ್ನು ತಿಳಿಸಿದರು.

ಮುಖ್ಯೋಪಾಧ್ಯಾಯ ನಿರಂಜನ್ ಪ್ರಸ್ತಾವಿಸಿ, ಸ್ವಾಗತಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಜಮುನ ಕೆ.ಎಸ್. ವರದಿ ಮಂಡಿಸಿದರು. ಶಿಕ್ಷಕಿ ಪ್ರೀತಿ ಸಂದೇಶ ವಾಚಿಸಿದರು. ಶಿಕ್ಷಕರಾದ ಜಯಲಕ್ಷ್ಮಿ ಮತ್ತು ಜಯರಾಮ ನಿರೂಪಿಸಿದರು. ದೈಹಿಕ ಶಿಕ್ಷಕ ವಿಠಲ ನಾಯ್ಕ ವಂದಿಸಿದರು.

Related posts

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya
error: Content is protected !!