25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

ಉಜಿರೆ : ಇಲ್ಲಿಯ ಆದಿಗುರು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಒಂದು ವರ್ಷದ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿಗಳಿಗೆ ಸಿದ್ದ ಉಡುಪು ಉದ್ಯಮ ಕ್ಷೇತ್ರದ ಬಗ್ಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ತರಭೇತಿ ಕೇಂದ್ರದ ಮಾಲಕರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಇವರ ಸಹಕಾರದಲ್ಲಿ ಡಿ. 19ರಂದು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಲಾಯಿತು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯು, ಆಧುನಿಕ ಯಂತ್ರೋಪಕರಣಗಳು ಮತ್ತು ಕಾರ್ಮಿಕರ ಅರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಕಾಳಜಿ ಹೊಂದಿರುವ ಹಾಗೂ ಗ್ರಾಮೀಣ ಮಹಿಳೆಯರಿಗೆ ಅತ್ಯಧಿಕ ಉದ್ಯೋಗಾವಕಾಶ ನೀಡಿದ ಸುಸಜ್ಜಿತ ಸಂಸ್ಥೆಯಾಗಿದೆ.
ಸಂಸ್ಥೆಯ ಪ್ರತಿಯೊಂದು ಯಂತ್ರೋಪಕರಣ ಹಾಗೂ ಉತ್ಪಾದನೆಯ ಬಗ್ಗೆ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ಧನ್ ಹಾಗೂ ಜನರಲ್ ಮ್ಯಾನೇಜರ್ ಜೀವನ್ ಇವರು ಮಾಹಿತಿ ನೀಡಿದರು.

ಆದಿಗುರು ಕೌಶಲ್ಯಾಭಿವೃದ್ಧಿ ತರಭೇತಿ ಕೇಂದ್ರವು ಸತತ ಮೂರು ವರ್ಷದಿಂದ ಉಜಿರೆಯಲ್ಲಿ ಫ್ಯಾಷನ್ ಡಿಸೈನಿಂಗ್, ಎಂಬ್ರಾಯ್ ಡರಿ, ಮೆಹಂದಿ, ಆರ್ಟ್ ಮತ್ತು ಕ್ರಾಫ್ಟ್ ಮೊದಲಾದ ತರಭೇತಿ ಗಳನ್ನು ನೀಡುತ್ತಾ ಬಂದಿರುವ ಸಂಸ್ಥೆಯಾಗಿರುತ್ತದೆ.

Related posts

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya
error: Content is protected !!