July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

ಉಜಿರೆ : ಇಲ್ಲಿಯ ಆದಿಗುರು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಒಂದು ವರ್ಷದ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿಗಳಿಗೆ ಸಿದ್ದ ಉಡುಪು ಉದ್ಯಮ ಕ್ಷೇತ್ರದ ಬಗ್ಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ತರಭೇತಿ ಕೇಂದ್ರದ ಮಾಲಕರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಇವರ ಸಹಕಾರದಲ್ಲಿ ಡಿ. 19ರಂದು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಲಾಯಿತು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯು, ಆಧುನಿಕ ಯಂತ್ರೋಪಕರಣಗಳು ಮತ್ತು ಕಾರ್ಮಿಕರ ಅರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಕಾಳಜಿ ಹೊಂದಿರುವ ಹಾಗೂ ಗ್ರಾಮೀಣ ಮಹಿಳೆಯರಿಗೆ ಅತ್ಯಧಿಕ ಉದ್ಯೋಗಾವಕಾಶ ನೀಡಿದ ಸುಸಜ್ಜಿತ ಸಂಸ್ಥೆಯಾಗಿದೆ.
ಸಂಸ್ಥೆಯ ಪ್ರತಿಯೊಂದು ಯಂತ್ರೋಪಕರಣ ಹಾಗೂ ಉತ್ಪಾದನೆಯ ಬಗ್ಗೆ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ಧನ್ ಹಾಗೂ ಜನರಲ್ ಮ್ಯಾನೇಜರ್ ಜೀವನ್ ಇವರು ಮಾಹಿತಿ ನೀಡಿದರು.

ಆದಿಗುರು ಕೌಶಲ್ಯಾಭಿವೃದ್ಧಿ ತರಭೇತಿ ಕೇಂದ್ರವು ಸತತ ಮೂರು ವರ್ಷದಿಂದ ಉಜಿರೆಯಲ್ಲಿ ಫ್ಯಾಷನ್ ಡಿಸೈನಿಂಗ್, ಎಂಬ್ರಾಯ್ ಡರಿ, ಮೆಹಂದಿ, ಆರ್ಟ್ ಮತ್ತು ಕ್ರಾಫ್ಟ್ ಮೊದಲಾದ ತರಭೇತಿ ಗಳನ್ನು ನೀಡುತ್ತಾ ಬಂದಿರುವ ಸಂಸ್ಥೆಯಾಗಿರುತ್ತದೆ.

Related posts

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!