July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

ಉಜಿರೆ: ಪವಾಡ ಪುರುಷ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ, ದುರಸ್ತಿ ಹಾಗೂ ನವೀಕರಣಗೊಂಡ
ಉಜಿರೆಯ ಸಂತ ಅಂತೋನಿ ಕ್ರೈಸ್ತ ದೇವಾಲಯದ‌ ಉದ್ಟಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ
ಡಿ. 22ರಂದು ನಡೆಯಿತು.

ಮಂಗಳೂರು ಧಮ೯ಪ್ರಾಂತ್ಯದ ಧಮ೯ಧ್ಯಕ್ಷರಾದ ರೈ. ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಅಧ್ಯಕ್ಷತೆ ವಹಿಸಿ, ನವೀಕರಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಜಿರೆ ಮೊಹಿದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಯು.ಹೆಚ್ ಭಾಗವಹಿಸಿದ್ದರು.

ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ, ಚಚ್೯ ಪಾಲನಾ ಸಮಿತಿ ಉಪಾಧ್ಯಕ್ಷ ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್,
ಶ್ರೀಮತಿ ಲವೀನಾ ಸಾಂತ್ಯೋರ ಆಯೋಗಾಂಚಿ ಸಂಯೋಜಕಿ ಉಪಸ್ಥಿತರಿದ್ದರು.


ವಲಯದ ಮತ್ತು ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು.

ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ ಸ್ವಾಗತಿಸಿದರು. ವಿಶಾಲ್ ಪಿಂಟೋ ಕಾಯ೯ಕ್ರಮ ನಿರೂಪಿಸಿದರು.

Related posts

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya
error: Content is protected !!