September 6, 2026
Uncategorized

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವು
ಡಿ. 22ರಂದು ನಡೆಯಿತು.

ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ ಬಳಿ ನಿರ್ಮಿಸಿದ ಸಂತ ಅಂತೋನಿಯವರ ಗ್ರೋಟ್ಟೋ ಆಶೀರ್ವಚನ, ನಂತರ ಮುಖ್ಯ ದ್ವಾರದ ಉದ್ಘಾಟನೆ, ವೆಲಂಕಣಿ ಮಾತೆಯ ಗ್ರೋಟ್ಟೋ ಬಳಿಕ ಚರ್ಚ್ ಶುದ್ಧಿಕರಣ, ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಪವಿತ್ರ ಪರಮ ಪ್ರಸಾದ ಮಂಟಪ ಉದ್ಘಾಟಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಬಲಿಪೂಜೆಯಲ್ಲಿ ಧರ್ಮಾಧ್ಯಕ್ಷರೊಂದಿಗೆ, ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ ಹಾಗೂ ವಲಯದ ಮತ್ತು ಇದೆ ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು. ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಆರ್ಥಿಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಆಟಿಡೊಂಜಿ ದಿನ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾಪ೯ಣೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya
error: Content is protected !!