September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು.

ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ ಗಿರಿಜಾ ಭಟ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಾಧನಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರತಿಭಾ ಸುಧೀರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿಯ ಕಾರ್ಯದರ್ಶಿ ರಮೇಶ್ ಮೂಲ್ಯ ಮತ್ತು ಕೋಶಾಧಿಕಾರಿ ಕುಶ ಪಿ ಉಪಸ್ಥಿತರಿದ್ದರು.

ಸಾಧನಾ ಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಮಂಡಲದ ಪದವಿಯನ್ನು ವಾಚಿಸಿದರು. ಆಟೋಟ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ರಕ್ಷಿತಾ ಆರ್ ವಾಚಿಸಿದರು. ಶೋಭಾ ಅರುಣ್ ಹೆಗ್ಡೆ ಸ್ವಾಗತಿಸಿ , ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಲತಾ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya
error: Content is protected !!