23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಡಿ. 21ರಂದು ಜರಗಿತು.

ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಜನರು ನಾಯಕತ್ವ ವಹಿಸಿ ಸಂಘವನ್ನು ಮುಂದಕ್ಕೆ ಬೆಳೆಸಬೇಕು ಮತ್ತು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬೇಕು ಎಂದು ಹೇಳಿದರು.

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ, ಯುವ ವೇದಿಕೆಯ ಅಧ್ಯಕ್ಷರಾದ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಅಪರ್ಣ ಶಿವಕಾಂತ ಗೌಡ ಸಭೆಯನ್ನುದ್ದೆಶಿಸಿ ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕಪತ್ರ ಮಂಡನೆ ಮಾಡಿದರು.
ಯುವ ವೇದಿಕೆಯ ಕಾರ್ಯದರ್ಶಿಯಾದ ನಿರಂಜನ್ ಗೌಡ ಸುರುಳಿ, ಮಹಿಳಾ ಯುವ ವೇದಿಕೆಯ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಫೆಬ್ರವರಿ 1-2026 ರಂದು ನೀರಚಿಲುಮೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮ ಸಮಿತಿಯ ವಾಲಿಬಾಲ್ ಟೂರ್ನಮೆಂಟ್ ನ ಕಾಗದ ಬಿಡುಗಡೆ ಮಾಡಲಾಯಿತು.

ಮಮತ ಶಿವರಾಮ ಗೌಡ ಪ್ರಾರ್ಥಿಸಿದರು. ಸಹಕಾರಿಯ ನಿರ್ದೇಶಕರಾದ ಭರತ್ ಗೌಡ ಹಾನಿಬೆಟ್ಟು ಸ್ವಾಗತಿಸಿ, ಸಂಘದ ಉಪಾಧ್ಯಕ್ಷರಾದ ಸುರೇಶ್ ಗೌಡ ಕೂಡಿಗೆ ವಂದಿಸಿದರು.ಯಶೋಧ ರಾಘವೇಂದ್ರ ಗೌಡ ಪೊದುoಬಿಲ ಮತ್ತು ಸಿಬ್ಬಂದಿಯಾದ ಗೀತಾ ಚಿದಾನಂದ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!