July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

ಮುಂಡಾಜೆ: ನಿಡಿಗಲ್ ಕಲ್ಮಂಜ ಗ್ರಾಮ ಪಂಚಾಯತ್ ಬಳಿ ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿರುವ ಶ್ರೀ ದುರ್ಗಾ ವುಡ್ ಇಂಡಸ್ಟ್ರೀಸ್ ಇದರ ಸಹಸಂಸ್ಥೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್‌ನ ನೂತನ ಶೋರೂಂನ ಪ್ರಾರಂಭೋತ್ಸವವು ಮುಂಡಾಜೆ ಸೋಮಂತಡ್ಕದಲ್ಲಿ ಡಿ.21 ರಂದು ಉದ್ಘಾಟನೆಗೊಂಡಿದೆ.

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರಾದ ಶರತ್‌ಕೃಷ್ಣ ಪಡ್ವೆಟ್ನಾಯ ಅವರು ಉದ್ಘಾಟಿಸಿ ಭಗವಂತನ ಅನುಗ್ರಹದಿಂದ ಈ ಉದ್ಯಮ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಮಾತನಾಡಿ ನಗುಮೊಗದ ಸೇವೆಯಿಂದ ಉದ್ಯಮದಲ್ಲಿ ಗೆಲುವು ಸಾಧಿಸಲು ಸಾಧ್ಯವಿದೆ ಎಂದರು.

ಮುಖ್ಯ ಅಥಿತಿಗಳಾಗಿ ಉಜಿರೆ ಶ್ರೀ ಶಾರದಾ ಜುವೆಲ್ಲರ್ಸ್ ನ ಆನಂದ ಆಚಾರ್ಯ, ಚಂದ್ರಾವತಿ ಸೋಮಂತ್ತಡ್ಕ, ಪಂಚಶ್ರೀ ಎಂಟರ್ಪ್ರೈಸಸ್ ಮಾಲಕಿ ಚಂದ್ರಾವತಿ ನಾರಾಯಣ ಗೌಡ, ಬ್ಯಾಂಕ್ ಆಫ್ ಬರೋಡ ಮುಂಡಾಜೆ ಮ್ಯಾನೇಜರ್ ಜೆಗತ ಎ., ಮುಂಡಾಜೆ ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ, ಉಜಿರೆ ಹಳ್ಳಿಮನೆ ಮಾಲಕ ಪ್ರವೀಣ್‌ ಫೆರ್ನಾಂಡೀಸ್, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ದೆಹಲಿ ಉದ್ಯಮಿ ಪ್ರಭಾಕರ ಶೆಟ್ಟಿ, ಗುತ್ತಿಗೆದಾರ ಚೆನ್ನಕೇಶವ, ಸೋಮಂತಡ್ಕ, ಮುಂಡಾಜೆ ಹಾ.ಉ.ಸ ಸಂಘದ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ,ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್, ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಉದ್ಯಮಿಗಳಾದ ವಿಜಯ್ ನಿಡಿಗಲ್,ಜಯಂತ್ ಉಜಿರೆ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಿ ಶುಭ ಕೋರಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಸ್ವಾಗತಿಸಿ ,ಸತ್ಕರಿಸಿದರು.ಯುವ ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನೆ ಪ್ರಯುಕ್ತ ಗ್ರಾಹಕರಿಗೆ ಅದೃಷ್ಟ ಯೋಜನೆ ಪ್ರಾರಂಭಿಸಿದ್ದು ಸದಸ್ಯರಾಗಲು ಸುವರ್ಣ ಅವಕಾಶವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

ಶೋ ರೂಮ್ ನ ವೈಶಿಷ್ಟ್ಯಗಳು: ಇಲ್ಲಿ ಎಲ್ಲ ಕಂಪನಿಗಳ ಟಿವಿ, ಫ್ರಿಡ್ಜ್,ವಾಷಿಂಗ್ ಮೆಸಿನ್, ಮಿಕ್ಸಿ, ಡ್ರೈಂಡರ್, ಕಾಟ್, ಡೈನಿಂಗ್ ಟೇಬಲ್, ಕಪಾಟು, ಫ್ಯಾನ್, ಇನ್ನಿತರ ಗ್ರಹೋಪಯೋಗಿ ಉತ್ಪನ್ನಗಳು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ, ವೈಶಾಖ್ ಆಚಾರ್ಯ, ವೈದಿಕ್ ಆಚಾರ್ಯ ತಿಳಿಸಿದರು.

Related posts

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya
error: Content is protected !!