25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

ಉಜಿರೆ : ಇಲ್ಲಿಯ ಆದಿಗುರು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಒಂದು ವರ್ಷದ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿಗಳಿಗೆ ಸಿದ್ದ ಉಡುಪು ಉದ್ಯಮ ಕ್ಷೇತ್ರದ ಬಗ್ಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ತರಭೇತಿ ಕೇಂದ್ರದ ಮಾಲಕರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಇವರ ಸಹಕಾರದಲ್ಲಿ ಡಿ. 19ರಂದು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಲಾಯಿತು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯು, ಆಧುನಿಕ ಯಂತ್ರೋಪಕರಣಗಳು ಮತ್ತು ಕಾರ್ಮಿಕರ ಅರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಕಾಳಜಿ ಹೊಂದಿರುವ ಹಾಗೂ ಗ್ರಾಮೀಣ ಮಹಿಳೆಯರಿಗೆ ಅತ್ಯಧಿಕ ಉದ್ಯೋಗಾವಕಾಶ ನೀಡಿದ ಸುಸಜ್ಜಿತ ಸಂಸ್ಥೆಯಾಗಿದೆ.
ಸಂಸ್ಥೆಯ ಪ್ರತಿಯೊಂದು ಯಂತ್ರೋಪಕರಣ ಹಾಗೂ ಉತ್ಪಾದನೆಯ ಬಗ್ಗೆ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ಧನ್ ಹಾಗೂ ಜನರಲ್ ಮ್ಯಾನೇಜರ್ ಜೀವನ್ ಇವರು ಮಾಹಿತಿ ನೀಡಿದರು.

ಆದಿಗುರು ಕೌಶಲ್ಯಾಭಿವೃದ್ಧಿ ತರಭೇತಿ ಕೇಂದ್ರವು ಸತತ ಮೂರು ವರ್ಷದಿಂದ ಉಜಿರೆಯಲ್ಲಿ ಫ್ಯಾಷನ್ ಡಿಸೈನಿಂಗ್, ಎಂಬ್ರಾಯ್ ಡರಿ, ಮೆಹಂದಿ, ಆರ್ಟ್ ಮತ್ತು ಕ್ರಾಫ್ಟ್ ಮೊದಲಾದ ತರಭೇತಿ ಗಳನ್ನು ನೀಡುತ್ತಾ ಬಂದಿರುವ ಸಂಸ್ಥೆಯಾಗಿರುತ್ತದೆ.

Related posts

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!