September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE, ನವದೆಹಲಿಗೆ ಸಂಯೋಜಿತ) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ – 2025 ಗೆ ಚಾಲನೆ ನೀಡಲಾಯಿತು.

ಉಜಿರೆಯ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಉಷಾ ಕಾರಂತ್ ಮತ್ತು ಉಪಾಧ್ಯಕ್ಷ ರವಿ ಬರಮೇಲು, ವಿದ್ಯಾರ್ಥಿಗಳು ಮತ್ತು ಪೋಷಕರ ಸಮ್ಮುಖದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಶಿಶೇಖರ್ ಕಾಕತ್ಕಾರ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್, ಶಾಲೆಯ ಮುಖ್ಯ ಶಿಕ್ಷಕ ಮನಮೋಹನ್ ನಾಯ್ಕ್, ವಿದ್ಯಾರ್ಥಿ ಸಂಘದ ನಾಯಕ ಸಿಯೋನ್ ರಾಜ್ ಸೇರಿದಂತೆ ಇತರೆ ಶಿಕ್ಷಕರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳು ವಿಶೇಷವಾಗಿ ತಯಾರಿಸಿದ ‘ಕಲಾಬ್ದಿ -2025’ ಭಿತ್ತಿಫಲಕದ ಕಲಾ ಕುಸುರಿಯನ್ನು ಬಿಡುಗಡೆಗೊಳಿಸಿದರು.

ಸಂಗೀತ, ಕರಾಟೆ, ಹಾರ್ಮೋನಿಯಂ, ಭರತನಾಟ್ಯ, ಯಕ್ಷಗಾನ, ನಾಟಕ ಇತ್ಯಾದಿ ಲಲಿತ ಕಲೆಗಳನ್ನು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ತಾಲೂಕು, ಜಿಲ್ಲೆಗಳಲ್ಲಿ ಗುರುತಿಸಿ ವಂತೆ ಮಾಡಿದ ಶಿಕ್ಷಕರು ಸೇರಿದಂತೆ ಸ್ಕೌಟ್ ಗೈಡ್ ಹಿಮಾಲಯ ವುಡ್ ಬಾಜ್ ತರಬೇತಿ ಪಡೆದ ಶಿಕ್ಷಕರಿಗೆ ಮತ್ತು ಕಳೆದ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಿರು ಸಭಾ ಕಾರ್ಯಕ್ರಮದ ಬಳಿಕ ಪುಟಾಣಿ ವಿದ್ಯಾರ್ಥಿಗಳಿಂದ ಬಣ್ಣ ಬಣ್ಣದ ಉಡುಗೆ ತೊಡುಗೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ವಿಶೇಷವಾಗಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಪೋಷಕರು ಸಹ ನೃತ್ಯ ಪ್ರದರ್ಶನ ನೀಡಿದರು.

ಪ್ರತಿಭಾ ಸಮಾರಂಭದಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು, ಶಿಕ್ಷರು , ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು. ಸಮಾರಂಭವನ್ನು ಶಾಲೆಯ ಆಂಗ್ಲ ಭಾಷಾ ಅಧ್ಯಾಪಕಿ ನೀತು ಪ್ರಸಾದ್ ಮತ್ತು ಶಾಂತಿ ಜಾರ್ಜ್ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!