ಬೆಳ್ತಂಗಡಿ: ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಡಿ.21 ರಂದು , ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ನೆರವೇರಿತು.
ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಆಗಮಿಸಿ ಸಮವಸ್ತ್ರ ವಿತರಣೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಪ್ರಮೋದ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸೇವಾ ಪ್ರತಿನಿಧಿಗಳಾದ ಶ್ರೀಮತಿ ನಂದಿನಿ, ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ವಸಂತ ಮಡಕ್ಕಿಲ, ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದು, ಗೌರವಾಧ್ಯಕ್ಷ ಸದಾನಂದ ಶೆಟ್ಟಿ ಮಡಪಾಡಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.











