July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

ಉಜಿರೆ: ಪವಾಡ ಪುರುಷ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ, ದುರಸ್ತಿ ಹಾಗೂ ನವೀಕರಣಗೊಂಡ
ಉಜಿರೆಯ ಸಂತ ಅಂತೋನಿ ಕ್ರೈಸ್ತ ದೇವಾಲಯದ‌ ಉದ್ಟಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ
ಡಿ. 22ರಂದು ನಡೆಯಿತು.

ಮಂಗಳೂರು ಧಮ೯ಪ್ರಾಂತ್ಯದ ಧಮ೯ಧ್ಯಕ್ಷರಾದ ರೈ. ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಅಧ್ಯಕ್ಷತೆ ವಹಿಸಿ, ನವೀಕರಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಜಿರೆ ಮೊಹಿದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಯು.ಹೆಚ್ ಭಾಗವಹಿಸಿದ್ದರು.

ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ, ಚಚ್೯ ಪಾಲನಾ ಸಮಿತಿ ಉಪಾಧ್ಯಕ್ಷ ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್,
ಶ್ರೀಮತಿ ಲವೀನಾ ಸಾಂತ್ಯೋರ ಆಯೋಗಾಂಚಿ ಸಂಯೋಜಕಿ ಉಪಸ್ಥಿತರಿದ್ದರು.


ವಲಯದ ಮತ್ತು ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು.

ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ ಸ್ವಾಗತಿಸಿದರು. ವಿಶಾಲ್ ಪಿಂಟೋ ಕಾಯ೯ಕ್ರಮ ನಿರೂಪಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya
error: Content is protected !!