September 6, 2026
Uncategorized

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವು
ಡಿ. 22ರಂದು ನಡೆಯಿತು.

ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ ಬಳಿ ನಿರ್ಮಿಸಿದ ಸಂತ ಅಂತೋನಿಯವರ ಗ್ರೋಟ್ಟೋ ಆಶೀರ್ವಚನ, ನಂತರ ಮುಖ್ಯ ದ್ವಾರದ ಉದ್ಘಾಟನೆ, ವೆಲಂಕಣಿ ಮಾತೆಯ ಗ್ರೋಟ್ಟೋ ಬಳಿಕ ಚರ್ಚ್ ಶುದ್ಧಿಕರಣ, ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಪವಿತ್ರ ಪರಮ ಪ್ರಸಾದ ಮಂಟಪ ಉದ್ಘಾಟಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಬಲಿಪೂಜೆಯಲ್ಲಿ ಧರ್ಮಾಧ್ಯಕ್ಷರೊಂದಿಗೆ, ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ ಹಾಗೂ ವಲಯದ ಮತ್ತು ಇದೆ ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು. ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಆರ್ಥಿಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya
error: Content is protected !!