25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವು
ಡಿ. 22ರಂದು ನಡೆಯಿತು.

ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ ಬಳಿ ನಿರ್ಮಿಸಿದ ಸಂತ ಅಂತೋನಿಯವರ ಗ್ರೋಟ್ಟೋ ಆಶೀರ್ವಚನ, ನಂತರ ಮುಖ್ಯ ದ್ವಾರದ ಉದ್ಘಾಟನೆ, ವೆಲಂಕಣಿ ಮಾತೆಯ ಗ್ರೋಟ್ಟೋ ಬಳಿಕ ಚರ್ಚ್ ಶುದ್ಧಿಕರಣ, ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಪವಿತ್ರ ಪರಮ ಪ್ರಸಾದ ಮಂಟಪ ಉದ್ಘಾಟಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಬಲಿಪೂಜೆಯಲ್ಲಿ ಧರ್ಮಾಧ್ಯಕ್ಷರೊಂದಿಗೆ, ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ ಹಾಗೂ ವಲಯದ ಮತ್ತು ಇದೆ ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು. ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಆರ್ಥಿಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!