23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು.

ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ ಗಿರಿಜಾ ಭಟ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಾಧನಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರತಿಭಾ ಸುಧೀರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿಯ ಕಾರ್ಯದರ್ಶಿ ರಮೇಶ್ ಮೂಲ್ಯ ಮತ್ತು ಕೋಶಾಧಿಕಾರಿ ಕುಶ ಪಿ ಉಪಸ್ಥಿತರಿದ್ದರು.

ಸಾಧನಾ ಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಮಂಡಲದ ಪದವಿಯನ್ನು ವಾಚಿಸಿದರು. ಆಟೋಟ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ರಕ್ಷಿತಾ ಆರ್ ವಾಚಿಸಿದರು. ಶೋಭಾ ಅರುಣ್ ಹೆಗ್ಡೆ ಸ್ವಾಗತಿಸಿ , ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಲತಾ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya
error: Content is protected !!