22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಡಿ. 21ರಂದು ಜರಗಿತು.

ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಜನರು ನಾಯಕತ್ವ ವಹಿಸಿ ಸಂಘವನ್ನು ಮುಂದಕ್ಕೆ ಬೆಳೆಸಬೇಕು ಮತ್ತು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬೇಕು ಎಂದು ಹೇಳಿದರು.

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ, ಯುವ ವೇದಿಕೆಯ ಅಧ್ಯಕ್ಷರಾದ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಅಪರ್ಣ ಶಿವಕಾಂತ ಗೌಡ ಸಭೆಯನ್ನುದ್ದೆಶಿಸಿ ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕಪತ್ರ ಮಂಡನೆ ಮಾಡಿದರು.
ಯುವ ವೇದಿಕೆಯ ಕಾರ್ಯದರ್ಶಿಯಾದ ನಿರಂಜನ್ ಗೌಡ ಸುರುಳಿ, ಮಹಿಳಾ ಯುವ ವೇದಿಕೆಯ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಫೆಬ್ರವರಿ 1-2026 ರಂದು ನೀರಚಿಲುಮೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮ ಸಮಿತಿಯ ವಾಲಿಬಾಲ್ ಟೂರ್ನಮೆಂಟ್ ನ ಕಾಗದ ಬಿಡುಗಡೆ ಮಾಡಲಾಯಿತು.

ಮಮತ ಶಿವರಾಮ ಗೌಡ ಪ್ರಾರ್ಥಿಸಿದರು. ಸಹಕಾರಿಯ ನಿರ್ದೇಶಕರಾದ ಭರತ್ ಗೌಡ ಹಾನಿಬೆಟ್ಟು ಸ್ವಾಗತಿಸಿ, ಸಂಘದ ಉಪಾಧ್ಯಕ್ಷರಾದ ಸುರೇಶ್ ಗೌಡ ಕೂಡಿಗೆ ವಂದಿಸಿದರು.ಯಶೋಧ ರಾಘವೇಂದ್ರ ಗೌಡ ಪೊದುoಬಿಲ ಮತ್ತು ಸಿಬ್ಬಂದಿಯಾದ ಗೀತಾ ಚಿದಾನಂದ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!